ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.

ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

17 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

22 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago