ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.

ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

29 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago