ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಕದ್ದೊಯ್ದ ಖದೀಮರು

ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ವೃದ್ಧೆಗೆ ಅರಿವಿಲ್ಲದೇ ಖದೀಮರು ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ರಂಗನಾಥ ಸ್ವಾಮಿ 87ನೇ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.

ಏ.13ರಂದು ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿಯ 87ನೇ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಈ ಬ್ರಹ್ಮರಥೋತ್ಸವ ನಿಮಿತ್ತ ದೂರುದಾರರಾದ ಲಕ್ಷೀದೇವಿ ಅವರು ನೆಲಮಂಗಲದಿಂದ ತಮ್ಮ ತವರು ಮನೆ ಇಸ್ತೂರು ಗ್ರಾಮಕ್ಕೆ ಬಂದು ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವಕ್ಕೆ ಮಕ್ಕಳು ಸಮೇತ ತಾಯಿ ರಂಗಮ್ಮ ಜೊತೆ ಹೋಗಿದ್ದರು.

ದೂರುದಾರರಾದ ಲಕ್ಷ್ಮೀದೇವಿ ಅವರು ತಮ್ಮ ತಾಯಿ 71 ವರ್ಷದ ವಯಸ್ಸಿನ ರಂಗಮ್ಮಗೆ 2012ರಲ್ಲಿ ನೆಲಮಂಗಲ ಟೌನ್ ನಲ್ಲಿರುವ ಗಿರವಿ ಅಂಗಡಿಯೊಂದರಲ್ಲಿ 1.45 ಲಕ್ಷ ಮೌಲ್ಯದ ಒಟ್ಟು 50 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಒಂದು ಚಿನ್ನದ ಕಾಸನ್ನು ಮಾಡಿಸಿ ಕೊಟ್ಟಿದ್ದರು.

ಬ್ರಹ್ಮರಥೋತ್ಸವದಲ್ಲಿ ರಥ ಎಳೆಯುವಾಗ ಆ ಜನಜಂಗುಳಿಯಲ್ಲಿ ಯಾರೋ ಖದೀಮರು ರಂಗಮ್ಮ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ.

ಅದೇ‌ ದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು‌‌ ಮಾಡಲಾಗಿರುತ್ತದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

47 minutes ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

10 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

12 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

13 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago