ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಕದ್ದೊಯ್ದ ಖದೀಮರು

ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ವೃದ್ಧೆಗೆ ಅರಿವಿಲ್ಲದೇ ಖದೀಮರು ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ರಂಗನಾಥ ಸ್ವಾಮಿ 87ನೇ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.

ಏ.13ರಂದು ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿಯ 87ನೇ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಈ ಬ್ರಹ್ಮರಥೋತ್ಸವ ನಿಮಿತ್ತ ದೂರುದಾರರಾದ ಲಕ್ಷೀದೇವಿ ಅವರು ನೆಲಮಂಗಲದಿಂದ ತಮ್ಮ ತವರು ಮನೆ ಇಸ್ತೂರು ಗ್ರಾಮಕ್ಕೆ ಬಂದು ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವಕ್ಕೆ ಮಕ್ಕಳು ಸಮೇತ ತಾಯಿ ರಂಗಮ್ಮ ಜೊತೆ ಹೋಗಿದ್ದರು.

ದೂರುದಾರರಾದ ಲಕ್ಷ್ಮೀದೇವಿ ಅವರು ತಮ್ಮ ತಾಯಿ 71 ವರ್ಷದ ವಯಸ್ಸಿನ ರಂಗಮ್ಮಗೆ 2012ರಲ್ಲಿ ನೆಲಮಂಗಲ ಟೌನ್ ನಲ್ಲಿರುವ ಗಿರವಿ ಅಂಗಡಿಯೊಂದರಲ್ಲಿ 1.45 ಲಕ್ಷ ಮೌಲ್ಯದ ಒಟ್ಟು 50 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಒಂದು ಚಿನ್ನದ ಕಾಸನ್ನು ಮಾಡಿಸಿ ಕೊಟ್ಟಿದ್ದರು.

ಬ್ರಹ್ಮರಥೋತ್ಸವದಲ್ಲಿ ರಥ ಎಳೆಯುವಾಗ ಆ ಜನಜಂಗುಳಿಯಲ್ಲಿ ಯಾರೋ ಖದೀಮರು ರಂಗಮ್ಮ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ.

ಅದೇ‌ ದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು‌‌ ಮಾಡಲಾಗಿರುತ್ತದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

4 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

14 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

14 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

20 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

21 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago