ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ವೃದ್ಧೆಗೆ ಅರಿವಿಲ್ಲದೇ ಖದೀಮರು ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ರಂಗನಾಥ ಸ್ವಾಮಿ 87ನೇ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.
ಏ.13ರಂದು ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿಯ 87ನೇ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಈ ಬ್ರಹ್ಮರಥೋತ್ಸವ ನಿಮಿತ್ತ ದೂರುದಾರರಾದ ಲಕ್ಷೀದೇವಿ ಅವರು ನೆಲಮಂಗಲದಿಂದ ತಮ್ಮ ತವರು ಮನೆ ಇಸ್ತೂರು ಗ್ರಾಮಕ್ಕೆ ಬಂದು ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವಕ್ಕೆ ಮಕ್ಕಳು ಸಮೇತ ತಾಯಿ ರಂಗಮ್ಮ ಜೊತೆ ಹೋಗಿದ್ದರು.
ಬ್ರಹ್ಮರಥೋತ್ಸವದಲ್ಲಿ ರಥ ಎಳೆಯುವಾಗ ಆ ಜನಜಂಗುಳಿಯಲ್ಲಿ ಯಾರೋ ಖದೀಮರು ರಂಗಮ್ಮ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ.
ಅದೇ ದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಲಾಗಿರುತ್ತದೆ.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…