ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ವೃದ್ಧೆಗೆ ಅರಿವಿಲ್ಲದೇ ಖದೀಮರು ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ರಂಗನಾಥ ಸ್ವಾಮಿ 87ನೇ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.
ಏ.13ರಂದು ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿಯ 87ನೇ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಈ ಬ್ರಹ್ಮರಥೋತ್ಸವ ನಿಮಿತ್ತ ದೂರುದಾರರಾದ ಲಕ್ಷೀದೇವಿ ಅವರು ನೆಲಮಂಗಲದಿಂದ ತಮ್ಮ ತವರು ಮನೆ ಇಸ್ತೂರು ಗ್ರಾಮಕ್ಕೆ ಬಂದು ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವಕ್ಕೆ ಮಕ್ಕಳು ಸಮೇತ ತಾಯಿ ರಂಗಮ್ಮ ಜೊತೆ ಹೋಗಿದ್ದರು.
ಬ್ರಹ್ಮರಥೋತ್ಸವದಲ್ಲಿ ರಥ ಎಳೆಯುವಾಗ ಆ ಜನಜಂಗುಳಿಯಲ್ಲಿ ಯಾರೋ ಖದೀಮರು ರಂಗಮ್ಮ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ.
ಅದೇ ದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಲಾಗಿರುತ್ತದೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…