ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಕದ್ದೊಯ್ದ ಖದೀಮರು

ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ವೃದ್ಧೆಗೆ ಅರಿವಿಲ್ಲದೇ ಖದೀಮರು ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ರಂಗನಾಥ ಸ್ವಾಮಿ 87ನೇ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.

ಏ.13ರಂದು ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿಯ 87ನೇ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಈ ಬ್ರಹ್ಮರಥೋತ್ಸವ ನಿಮಿತ್ತ ದೂರುದಾರರಾದ ಲಕ್ಷೀದೇವಿ ಅವರು ನೆಲಮಂಗಲದಿಂದ ತಮ್ಮ ತವರು ಮನೆ ಇಸ್ತೂರು ಗ್ರಾಮಕ್ಕೆ ಬಂದು ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವಕ್ಕೆ ಮಕ್ಕಳು ಸಮೇತ ತಾಯಿ ರಂಗಮ್ಮ ಜೊತೆ ಹೋಗಿದ್ದರು.

ದೂರುದಾರರಾದ ಲಕ್ಷ್ಮೀದೇವಿ ಅವರು ತಮ್ಮ ತಾಯಿ 71 ವರ್ಷದ ವಯಸ್ಸಿನ ರಂಗಮ್ಮಗೆ 2012ರಲ್ಲಿ ನೆಲಮಂಗಲ ಟೌನ್ ನಲ್ಲಿರುವ ಗಿರವಿ ಅಂಗಡಿಯೊಂದರಲ್ಲಿ 1.45 ಲಕ್ಷ ಮೌಲ್ಯದ ಒಟ್ಟು 50 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಒಂದು ಚಿನ್ನದ ಕಾಸನ್ನು ಮಾಡಿಸಿ ಕೊಟ್ಟಿದ್ದರು.

ಬ್ರಹ್ಮರಥೋತ್ಸವದಲ್ಲಿ ರಥ ಎಳೆಯುವಾಗ ಆ ಜನಜಂಗುಳಿಯಲ್ಲಿ ಯಾರೋ ಖದೀಮರು ರಂಗಮ್ಮ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ.

ಅದೇ‌ ದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು‌‌ ಮಾಡಲಾಗಿರುತ್ತದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

2 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

14 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

14 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

15 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

20 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago