ಜಾತ್ರೆಯಲ್ಲಿ ವೃದ್ಧೆ ಕೊರಳಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ವೃದ್ಧೆಗೆ ಅರಿವಿಲ್ಲದೇ ಖದೀಮರು ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ರಂಗನಾಥ ಸ್ವಾಮಿ 87ನೇ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.
ಏ.13ರಂದು ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿಯ 87ನೇ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಈ ಬ್ರಹ್ಮರಥೋತ್ಸವ ನಿಮಿತ್ತ ದೂರುದಾರರಾದ ಲಕ್ಷೀದೇವಿ ಅವರು ನೆಲಮಂಗಲದಿಂದ ತಮ್ಮ ತವರು ಮನೆ ಇಸ್ತೂರು ಗ್ರಾಮಕ್ಕೆ ಬಂದು ಮಲ್ಲೋಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವಕ್ಕೆ ಮಕ್ಕಳು ಸಮೇತ ತಾಯಿ ರಂಗಮ್ಮ ಜೊತೆ ಹೋಗಿದ್ದರು.
ಬ್ರಹ್ಮರಥೋತ್ಸವದಲ್ಲಿ ರಥ ಎಳೆಯುವಾಗ ಆ ಜನಜಂಗುಳಿಯಲ್ಲಿ ಯಾರೋ ಖದೀಮರು ರಂಗಮ್ಮ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ.
ಅದೇ ದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಲಾಗಿರುತ್ತದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…