ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.
ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯವಿತ್ತು. ಸಂಗನಗೌಡನು ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ. ಕುಣಿಬೇಡಾ ಮುಂದೆ ಹೋಗು ಎಂದು ಆರೋಪಿಗಳು ಹೇಳಿದ್ದರಂತೆ.
ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ಸಂಗನಗೌಡನ ಕೊಲೆಯಲ್ಲಿ ಅಂತ್ಯವಾಗಿದೆ.
ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ ಆರೋಪಿಗಳು ಕುಳಿತಿದ್ದು, ಕುಡಗೋಲು, ಕೊಡಲಿ, ಚೈನ್, ಬಡಿಗೆ, ಕಬ್ಬಿನರಾಡ್ ನಿಂದು ಹೊಡೆದು ಕೊಲೆ ಮಾಡಲಾಗಿದೆ.
ಸಂಗನಗೌಡನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ.
ಕೊಲೆಗೆ ಸಂಭಂದಿಸಿದಂತೆ 8 ಜನ ಆರೋಪಿಗಳ ಬಂಧನ
ದೇಮಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಬಳಗನ್ನವರ (36), ವಿಜಯ ಬಳಗನ್ನವರ (26), ಸೂರಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ (21), ನಾಗರಾಜ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ (45) ಬಂಧಿತ ಆರೋಪಿಗಳು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೇಸರಗಿ ಠಾಣೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…