Categories: ಬೆಳಗಾವಿ

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.

ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯವಿತ್ತು. ಸಂಗನಗೌಡನು ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ. ಕುಣಿಬೇಡಾ ಮುಂದೆ ಹೋಗು ಎಂದು ಆರೋಪಿಗಳು ಹೇಳಿದ್ದರಂತೆ.

ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ಸಂಗನಗೌಡನ ಕೊಲೆಯಲ್ಲಿ ಅಂತ್ಯವಾಗಿದೆ.

ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ ಆರೋಪಿಗಳು ಕುಳಿತಿದ್ದು, ಕುಡಗೋಲು, ಕೊಡಲಿ, ಚೈನ್, ಬಡಿಗೆ, ಕಬ್ಬಿನರಾಡ್ ನಿಂದು ಹೊಡೆದು ಕೊಲೆ ಮಾಡಲಾಗಿದೆ.

ಸಂಗನಗೌಡನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ.

ಕೊಲೆಗೆ ಸಂಭಂದಿಸಿದಂತೆ 8 ಜನ ಆರೋಪಿಗಳ ಬಂಧನ

ದೇಮಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಬಳಗನ್ನವರ (36), ವಿಜಯ ಬಳಗನ್ನವರ (26), ಸೂರಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ (21), ನಾಗರಾಜ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ (45) ಬಂಧಿತ ಆರೋಪಿಗಳು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಸರಗಿ ಠಾಣೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

2 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

4 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

6 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

14 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

24 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago