Categories: ಬೆಳಗಾವಿ

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.

ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯವಿತ್ತು. ಸಂಗನಗೌಡನು ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ. ಕುಣಿಬೇಡಾ ಮುಂದೆ ಹೋಗು ಎಂದು ಆರೋಪಿಗಳು ಹೇಳಿದ್ದರಂತೆ.

ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ಸಂಗನಗೌಡನ ಕೊಲೆಯಲ್ಲಿ ಅಂತ್ಯವಾಗಿದೆ.

ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ ಆರೋಪಿಗಳು ಕುಳಿತಿದ್ದು, ಕುಡಗೋಲು, ಕೊಡಲಿ, ಚೈನ್, ಬಡಿಗೆ, ಕಬ್ಬಿನರಾಡ್ ನಿಂದು ಹೊಡೆದು ಕೊಲೆ ಮಾಡಲಾಗಿದೆ.

ಸಂಗನಗೌಡನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ.

ಕೊಲೆಗೆ ಸಂಭಂದಿಸಿದಂತೆ 8 ಜನ ಆರೋಪಿಗಳ ಬಂಧನ

ದೇಮಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಬಳಗನ್ನವರ (36), ವಿಜಯ ಬಳಗನ್ನವರ (26), ಸೂರಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ (21), ನಾಗರಾಜ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ (45) ಬಂಧಿತ ಆರೋಪಿಗಳು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಸರಗಿ ಠಾಣೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

7 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

16 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

21 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

1 day ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago