ಜಾತ್ರೆ, ಮಾರುಕಟ್ಟೆ ಹಾಗೂ ಬಸ್ ಗಳಲ್ಲಿ ಮಹಿಳೆಯರ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಆರ್ ಪುರ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 40 ಲಕ್ಷ ಮೌಲ್ಯದ 536 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ ನಗರದ ವಿವಿಧ ಪೊಲೀಸ ಠಾಣೆಗಳಲ್ಲಿ ದಾಖಲಾಗಿದ್ದ 7 ಇತರೆ ಪ್ರಕರಣಗಳು ಬಗೆಹರಿದಂತಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ನಗರ ಪೊಲೀಸರು ಇಬ್ಬರು ಅಂತರ ರಾಜ್ಯ ಅಪರಾಧಿಗಳು ಸೇರಿದಂತೆ ಒಟ್ಟು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 30.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದರು.
ಥಾಯ್ಲೆಂಡ್ ನಿಂದ ಹೈಡ್ರೋ ಗಾಂಜಾ ಕಳ್ಳಸಾಗಾಣೆ ಮಾಡುತ್ತಿದ್ದ ಮಹಿಳೆಯನ್ನು ಸಿಸಿಬಿಯ ಮಾದಕ ದ್ರವ್ಯ ವಿಭಾಗವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ 25 ಲಕ್ಷ ಮೌಲ್ಯದ 570 ಗ್ರಾಂ ಹೈಡ್ರೋ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮತ್ತೋರ್ವ ಆರೋಪಿ ತಲೆಮರಿಸಿಕೊಂಡಿದ್ದು, ಆತನ ಶೋಧ ಕಾರ್ಯ ಮುಂದುವರೆದಿದೆ ಎಂದರು.
ಬೆಂಗಳೂರು ನಗರದಲ್ಲಿ ಶಾಂತಿಯುತವಾಗಿ ಗೌರಿ ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಆ ಪೈಕಿ ಸುಪ್ರೀಂ ಕೋರ್ಟ್ ಆದೇಶದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಬಳಸಬೇಕು. ರಾತ್ರಿ 10 ಗಂಟೆ ನಂತರ ಹಾಗೂ ಬೆಳಗ್ಗೆ 6 ಗಂಟೆಗೂ ಮುನ್ನ ಯಾವುದೇ ರೀತಿಯ ಪಟಾಕಿ ಹಚ್ಚುವಂತಿಲ್ಲ. ಗಣೇಶ ಮೂರ್ತಿಯ ಮೆರವಣಿಗೆಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ನೀಡಿದರು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…