ಜಾತ್ರೆ, ಮಾರುಕಟ್ಟೆ ಹಾಗೂ ಬಸ್ ಗಳಲ್ಲಿ ಮಹಿಳೆಯರ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಆರ್ ಪುರ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 40 ಲಕ್ಷ ಮೌಲ್ಯದ 536 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ ನಗರದ ವಿವಿಧ ಪೊಲೀಸ ಠಾಣೆಗಳಲ್ಲಿ ದಾಖಲಾಗಿದ್ದ 7 ಇತರೆ ಪ್ರಕರಣಗಳು ಬಗೆಹರಿದಂತಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ನಗರ ಪೊಲೀಸರು ಇಬ್ಬರು ಅಂತರ ರಾಜ್ಯ ಅಪರಾಧಿಗಳು ಸೇರಿದಂತೆ ಒಟ್ಟು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 30.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದರು.
ಥಾಯ್ಲೆಂಡ್ ನಿಂದ ಹೈಡ್ರೋ ಗಾಂಜಾ ಕಳ್ಳಸಾಗಾಣೆ ಮಾಡುತ್ತಿದ್ದ ಮಹಿಳೆಯನ್ನು ಸಿಸಿಬಿಯ ಮಾದಕ ದ್ರವ್ಯ ವಿಭಾಗವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ 25 ಲಕ್ಷ ಮೌಲ್ಯದ 570 ಗ್ರಾಂ ಹೈಡ್ರೋ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮತ್ತೋರ್ವ ಆರೋಪಿ ತಲೆಮರಿಸಿಕೊಂಡಿದ್ದು, ಆತನ ಶೋಧ ಕಾರ್ಯ ಮುಂದುವರೆದಿದೆ ಎಂದರು.
ಬೆಂಗಳೂರು ನಗರದಲ್ಲಿ ಶಾಂತಿಯುತವಾಗಿ ಗೌರಿ ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಆ ಪೈಕಿ ಸುಪ್ರೀಂ ಕೋರ್ಟ್ ಆದೇಶದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಬಳಸಬೇಕು. ರಾತ್ರಿ 10 ಗಂಟೆ ನಂತರ ಹಾಗೂ ಬೆಳಗ್ಗೆ 6 ಗಂಟೆಗೂ ಮುನ್ನ ಯಾವುದೇ ರೀತಿಯ ಪಟಾಕಿ ಹಚ್ಚುವಂತಿಲ್ಲ. ಗಣೇಶ ಮೂರ್ತಿಯ ಮೆರವಣಿಗೆಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ನೀಡಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…