ಜಾತ್ರೆ, ಮಾರುಕಟ್ಟೆ ಹಾಗೂ ಬಸ್ ಗಳಲ್ಲಿ ಮಹಿಳೆಯರ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಆರ್ ಪುರ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 40 ಲಕ್ಷ ಮೌಲ್ಯದ 536 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ ನಗರದ ವಿವಿಧ ಪೊಲೀಸ ಠಾಣೆಗಳಲ್ಲಿ ದಾಖಲಾಗಿದ್ದ 7 ಇತರೆ ಪ್ರಕರಣಗಳು ಬಗೆಹರಿದಂತಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ನಗರ ಪೊಲೀಸರು ಇಬ್ಬರು ಅಂತರ ರಾಜ್ಯ ಅಪರಾಧಿಗಳು ಸೇರಿದಂತೆ ಒಟ್ಟು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 30.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದರು.
ಥಾಯ್ಲೆಂಡ್ ನಿಂದ ಹೈಡ್ರೋ ಗಾಂಜಾ ಕಳ್ಳಸಾಗಾಣೆ ಮಾಡುತ್ತಿದ್ದ ಮಹಿಳೆಯನ್ನು ಸಿಸಿಬಿಯ ಮಾದಕ ದ್ರವ್ಯ ವಿಭಾಗವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ 25 ಲಕ್ಷ ಮೌಲ್ಯದ 570 ಗ್ರಾಂ ಹೈಡ್ರೋ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮತ್ತೋರ್ವ ಆರೋಪಿ ತಲೆಮರಿಸಿಕೊಂಡಿದ್ದು, ಆತನ ಶೋಧ ಕಾರ್ಯ ಮುಂದುವರೆದಿದೆ ಎಂದರು.
ಬೆಂಗಳೂರು ನಗರದಲ್ಲಿ ಶಾಂತಿಯುತವಾಗಿ ಗೌರಿ ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಆ ಪೈಕಿ ಸುಪ್ರೀಂ ಕೋರ್ಟ್ ಆದೇಶದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಬಳಸಬೇಕು. ರಾತ್ರಿ 10 ಗಂಟೆ ನಂತರ ಹಾಗೂ ಬೆಳಗ್ಗೆ 6 ಗಂಟೆಗೂ ಮುನ್ನ ಯಾವುದೇ ರೀತಿಯ ಪಟಾಕಿ ಹಚ್ಚುವಂತಿಲ್ಲ. ಗಣೇಶ ಮೂರ್ತಿಯ ಮೆರವಣಿಗೆಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ನೀಡಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…