ಜಾತ್ರೆ, ಮಾರುಕಟ್ಟೆ ಹಾಗೂ ಬಸ್ ಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಮಹಿಳೆ ಅಂದರ್: ಬಂಧಿತಳಿಂದ 40 ಲಕ್ಷ ಮೌಲ್ಯದ 536 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ನಗದು ವಶ

ಜಾತ್ರೆ, ಮಾರುಕಟ್ಟೆ ಹಾಗೂ ಬಸ್ ಗಳಲ್ಲಿ ಮಹಿಳೆಯರ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಆರ್ ಪುರ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 40 ಲಕ್ಷ ಮೌಲ್ಯದ 536 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಈ ಬಂಧನದಿಂದ ನಗರದ ವಿವಿಧ ಪೊಲೀಸ ಠಾಣೆಗಳಲ್ಲಿ ದಾಖಲಾಗಿದ್ದ 7 ಇತರೆ ಪ್ರಕರಣಗಳು ಬಗೆಹರಿದಂತಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ನಗರ ಪೊಲೀಸರು ಇಬ್ಬರು ಅಂತರ ರಾಜ್ಯ ಅಪರಾಧಿಗಳು ಸೇರಿದಂತೆ ಒಟ್ಟು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 30.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದರು.

ಜಲಸಂಪನ್ಮೂಲ ಇಲಾಖೆಯ ಗ್ರೂಪ್ ಸಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ನಕಲಿ ದಾಖಲೆ ಸಲ್ಲಿಸಿದ್ದ 37 ಅನರ್ಹ ಅಭ್ಯರ್ಥಿಗಳು ಹಾಗೂ 11 ಮಧ್ಯವರ್ತಿಗಳನ್ನು ಸಿಸಿಬಿಯ ವಿಶೇಷ ತನಿಖಾ ದಳವು ಬಂಧಿಸಿದೆ. ಹೆಚ್ಚಿನ ತನಿಖೆ ವೇಳೆ ಅಧಿಕಾರಿಗಳು 17 ಮೊಬೈಲ್ ಹಾಗೂ ಒಂದು ಹಾರ್ಡ್ ಡಿಸ್ಕ್, 40 ಲಕ್ಷದ 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಥಾಯ್ಲೆಂಡ್ ನಿಂದ ಹೈಡ್ರೋ ಗಾಂಜಾ ಕಳ್ಳಸಾಗಾಣೆ ಮಾಡುತ್ತಿದ್ದ ಮಹಿಳೆಯನ್ನು ಸಿಸಿಬಿಯ ಮಾದಕ ದ್ರವ್ಯ ವಿಭಾಗವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ 25 ಲಕ್ಷ ಮೌಲ್ಯದ 570 ಗ್ರಾಂ ಹೈಡ್ರೋ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮತ್ತೋರ್ವ ಆರೋಪಿ ತಲೆಮರಿಸಿಕೊಂಡಿದ್ದು, ಆತನ ಶೋಧ ಕಾರ್ಯ ಮುಂದುವರೆದಿದೆ ಎಂದರು.

ಇತ್ತೀಚೆಗೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್ ಫೀಲ್ಡ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇವರಿಂದ 5.81 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಹಾಗೂ 4 ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರ ಬಂಧನದಿಂದ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆ ಕಳ್ಳತನ ಹಾಗೂ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಬೆಳಕಿಗೆ ಬಂದಿವೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಶಾಂತಿಯುತವಾಗಿ ಗೌರಿ ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಆ ಪೈಕಿ ಸುಪ್ರೀಂ ಕೋರ್ಟ್ ಆದೇಶದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಬಳಸಬೇಕು. ರಾತ್ರಿ 10 ಗಂಟೆ ನಂತರ ಹಾಗೂ ಬೆಳಗ್ಗೆ 6 ಗಂಟೆಗೂ ಮುನ್ನ ಯಾವುದೇ ರೀತಿಯ ಪಟಾಕಿ ಹಚ್ಚುವಂತಿಲ್ಲ. ಗಣೇಶ ಮೂರ್ತಿಯ ಮೆರವಣಿಗೆಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ನೀಡಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago