Categories: ಕೋಲಾರ

ಜಾನಪದ ಕಲೆಗೆ ಪೋತ್ಸಾಹ ಅಗತ್ಯವಿದೆ- ವಿ.ಮನೋಹರ್

ಕೋಲಾರ: ಪ್ರಸ್ತುತ ಸನ್ನಿವೇಶದಲ್ಲಿ ಜಾನಪದ ಕಲೆಯು ಅಳಿವಿನಂಚಿನಲ್ಲಿದೆ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಯುವ ಸಮೂಹದ ಮೇಲೆ ಇದ್ದು ಕಲೆಗೆ ಹೆಚ್ಚಿನ ಪೋತ್ಸಾಹವು ಅಗತ್ಯವಿದೆ ಎಂದು ಸಂಗೀತಾ ನಿರ್ದೇಶಕ ಹಾಗೂ ಸಾಹಿತಿ ವಿ.ಮಹೋಹರ್ ತಿಳಿಸಿದರು.

ನಗರದ ಸಿ.ಬೈರೇಗೌಡ ನಗರದ ಮೈದಾನದಲ್ಲಿ ಭಾನುವಾರ ರಾತ್ರಿ ಜಗ್ಗಣ್ಣಕ್ಕ ಸಂಗೀತಾ ಸುಗ್ಗಿಯ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ನಮ್ಮ ಪೂರ್ವಜರು ನಡೆಸಿಕೊಂಡು ಬರತ್ತಿದ್ದ ಕಲೆಗಳು ಜಾಗತೀಕರಣ ಪ್ರಭಾವದಿಂದ ದೂರ ಸರಿಯುತ್ತಿವೆ ಇಂದಿನ ಮಕ್ಕಳಿಗೆ ಜಾನಪದ ಕಲೆಗಳ ಬಗ್ಗೆ ತಿಳಿಸಿಕೊಟ್ಟು ಜಾನಪದ ಸಾಹಿತ್ಯವನ್ನು ಮತ್ತು ಕಲೆಯನ್ನು ಉಳಿಸುವ ಪ್ರಯತ್ನಗಳು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಮಾತನಾಡಿ,  ದೇಶೀಯ ಕಲೆಯನ್ನು ಪರಿಚಯಿಸುವ ಪ್ರಯತ್ನವಾಗಿದ್ದು ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಸಾಂಸ್ಕೃತಿಕ ಕಲೆ, ಸಂಸ್ಕೃತಿ ಉಳಿಸಿ, ಬೆಳೆಸಲು ಉತ್ತೇಜಿಸಬೇಕು ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯ ಜೊತೆಗೆ ನಮ್ಮ ಸಂಸ್ಕೃತಿಯೊಂದಿಗೆ ಭಾಷೆಯನ್ನು ಉಳಿಸುವುದು ಮುಖ್ಯವಾಗಿದೆ ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಕವಾಗಿರುತ್ತದೆ, ಅದನ್ನು ಗುರುತಿಸಿ, ಪ್ರೋತ್ಸಾಹಿಸಿದಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮತ್ತು ಯುವಕರಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಿವೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕ ಹಾಗೂ ಜಾನಪದ ಗಾಯಕ ಗೋ.ನಾ ಸ್ವಾಮಿ ಮಾತನಾಡಿ, ಸಿನಿಮಾದ ಮಾಯಾಲೋಕದಲ್ಲಿ ದೇಶೀಯ ಜಾನಪದ ಕಲೆಗಳು ದೂರವಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಮೈಕ್ ಮುಟ್ಟದ ಕಲಾವಿದರನ್ನು ಗುರುತಿಸಿ ಬೆಳೆಸುವ ಉದ್ದೇಶವಾಗಿದೆ ಸ್ಥಳೀಯವಾದ ಕಲೆ ಸಂಸ್ಕೃತಿಗೆ ಚಪ್ಪಾಳೆ ಹೊಡೆದು ಅವರಿಗೂ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮುಂದಿನ ವರ್ಷ ಜನವರಿಯಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ 20 ಲಕ್ಷ ಮೊತ್ತದ ವಿಶ್ವ ಕನ್ನಡ ಜಾನಪದ ಗಾಯನ ಸ್ಪರ್ಧೆಯ ಲಾಂಛನ ಬಿಡುಗಡೆಗೊಳಿಸಿದರು.

ಜಗ್ಗಣ್ಣಕ್ಕ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ಧೆಗಳಿಗೆ ಬಹುಮಾನಗಳನ್ನು ವಿತರಿಸಿದರು ವೇದಿಕೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು, ಜಾನಪದ ಒಕ್ಕೂಟದ ಅಧ್ಯಕ್ಷ ನಾಗರಾಜ್, ನಿರ್ಮಿತಿ ಕೇಂದ್ರದ ನಾರಾಯಣಗೌಡ, ಶಿಕ್ಷಣ ಇಲಾಖೆಯ ಅಶೋಕ್, ರೇಷ್ಮೆ ಇಲಾಖೆಯ ಬೈರೇಗೌಡ, ನಿರೂಪಕಿ ಅಕ್ಷಿತಾ ಮುಂತಾದವರು ಇದ್ದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

6 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

6 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

10 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

17 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

18 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago