Categories: ಕೋಲಾರ

ಜಾನಪದ ಕಲೆಗೆ ಪೋತ್ಸಾಹ ಅಗತ್ಯವಿದೆ- ವಿ.ಮನೋಹರ್

ಕೋಲಾರ: ಪ್ರಸ್ತುತ ಸನ್ನಿವೇಶದಲ್ಲಿ ಜಾನಪದ ಕಲೆಯು ಅಳಿವಿನಂಚಿನಲ್ಲಿದೆ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಯುವ ಸಮೂಹದ ಮೇಲೆ ಇದ್ದು ಕಲೆಗೆ ಹೆಚ್ಚಿನ ಪೋತ್ಸಾಹವು ಅಗತ್ಯವಿದೆ ಎಂದು ಸಂಗೀತಾ ನಿರ್ದೇಶಕ ಹಾಗೂ ಸಾಹಿತಿ ವಿ.ಮಹೋಹರ್ ತಿಳಿಸಿದರು.

ನಗರದ ಸಿ.ಬೈರೇಗೌಡ ನಗರದ ಮೈದಾನದಲ್ಲಿ ಭಾನುವಾರ ರಾತ್ರಿ ಜಗ್ಗಣ್ಣಕ್ಕ ಸಂಗೀತಾ ಸುಗ್ಗಿಯ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ನಮ್ಮ ಪೂರ್ವಜರು ನಡೆಸಿಕೊಂಡು ಬರತ್ತಿದ್ದ ಕಲೆಗಳು ಜಾಗತೀಕರಣ ಪ್ರಭಾವದಿಂದ ದೂರ ಸರಿಯುತ್ತಿವೆ ಇಂದಿನ ಮಕ್ಕಳಿಗೆ ಜಾನಪದ ಕಲೆಗಳ ಬಗ್ಗೆ ತಿಳಿಸಿಕೊಟ್ಟು ಜಾನಪದ ಸಾಹಿತ್ಯವನ್ನು ಮತ್ತು ಕಲೆಯನ್ನು ಉಳಿಸುವ ಪ್ರಯತ್ನಗಳು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಮಾತನಾಡಿ,  ದೇಶೀಯ ಕಲೆಯನ್ನು ಪರಿಚಯಿಸುವ ಪ್ರಯತ್ನವಾಗಿದ್ದು ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಸಾಂಸ್ಕೃತಿಕ ಕಲೆ, ಸಂಸ್ಕೃತಿ ಉಳಿಸಿ, ಬೆಳೆಸಲು ಉತ್ತೇಜಿಸಬೇಕು ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯ ಜೊತೆಗೆ ನಮ್ಮ ಸಂಸ್ಕೃತಿಯೊಂದಿಗೆ ಭಾಷೆಯನ್ನು ಉಳಿಸುವುದು ಮುಖ್ಯವಾಗಿದೆ ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಕವಾಗಿರುತ್ತದೆ, ಅದನ್ನು ಗುರುತಿಸಿ, ಪ್ರೋತ್ಸಾಹಿಸಿದಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮತ್ತು ಯುವಕರಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಿವೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕ ಹಾಗೂ ಜಾನಪದ ಗಾಯಕ ಗೋ.ನಾ ಸ್ವಾಮಿ ಮಾತನಾಡಿ, ಸಿನಿಮಾದ ಮಾಯಾಲೋಕದಲ್ಲಿ ದೇಶೀಯ ಜಾನಪದ ಕಲೆಗಳು ದೂರವಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಮೈಕ್ ಮುಟ್ಟದ ಕಲಾವಿದರನ್ನು ಗುರುತಿಸಿ ಬೆಳೆಸುವ ಉದ್ದೇಶವಾಗಿದೆ ಸ್ಥಳೀಯವಾದ ಕಲೆ ಸಂಸ್ಕೃತಿಗೆ ಚಪ್ಪಾಳೆ ಹೊಡೆದು ಅವರಿಗೂ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮುಂದಿನ ವರ್ಷ ಜನವರಿಯಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ 20 ಲಕ್ಷ ಮೊತ್ತದ ವಿಶ್ವ ಕನ್ನಡ ಜಾನಪದ ಗಾಯನ ಸ್ಪರ್ಧೆಯ ಲಾಂಛನ ಬಿಡುಗಡೆಗೊಳಿಸಿದರು.

ಜಗ್ಗಣ್ಣಕ್ಕ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ಧೆಗಳಿಗೆ ಬಹುಮಾನಗಳನ್ನು ವಿತರಿಸಿದರು ವೇದಿಕೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು, ಜಾನಪದ ಒಕ್ಕೂಟದ ಅಧ್ಯಕ್ಷ ನಾಗರಾಜ್, ನಿರ್ಮಿತಿ ಕೇಂದ್ರದ ನಾರಾಯಣಗೌಡ, ಶಿಕ್ಷಣ ಇಲಾಖೆಯ ಅಶೋಕ್, ರೇಷ್ಮೆ ಇಲಾಖೆಯ ಬೈರೇಗೌಡ, ನಿರೂಪಕಿ ಅಕ್ಷಿತಾ ಮುಂತಾದವರು ಇದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

7 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

8 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

8 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

11 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

14 hours ago