ಜಿಲ್ಲಾಡಳಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಯುವಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಚಲನ(ರಿ.) ಸಹಯೋಗದೊಂದಿಗೆ ಜಾನಪದ ವಾದ್ಯ, ಜಾನಪದ ಗೀತೆ ಹಾಗೂ ಜಾನಪದ ನೃತ್ಯಗಳ ತರಬೇತಿ ಶಿಬಿರಕ್ಕೆ ನ. 4ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಾನಪದ ವಾಧ್ಯವನ್ನು ನುಡಿಸುವ ಮೂಲಕ ಉದ್ಘಾಟಿಸಲಾಯಿತು.
ಯುವ ಸಂಚಲನದ ಅಧ್ಯಕ್ಷರಾದ ಚಿದಾನಂದ ಮೂರ್ತಿಯವರು ಮಾತನಾಡಿ, “ಬಾಯಿಂದ ಬಾಯಿಗೆ ತಲುಪಿರುವ ಕಾರಣ ಜಾನಪದವು ಇನ್ನು ಉಳಿದಿದೆ. ಆದರೆ, ಈಗ ಜಾನಪದದ ಸ್ವರೂಪ ಬದಲಾಗಿ ಆಧುನಿಕ ಸಂಗೀತದ ಜೊತೆ ಸೇರಿ ಮೊಬೈಲ್ ಇಂದ ಮೊಬೈಲ್ ಗೆ ಫಾರ್ವರ್ಡ್ ಆಗುತ್ತಿದೆ. ಎಲ್ಲಾ ಹಾಡುಗಳಿಗೂ ಇತಿಹಾಸವಿರುತ್ತದೆ. ಹಾಡುಗಳಿಗೂ ಆರೋಗ್ಯಕ್ಕೂ ನೇರವಾಗಿ ಸಂಬಂಧವಿರುತ್ತದೆ. ಮಾನಸಿಕ ಖಿನ್ನತೆಯಿಂದ ಹೊರಬರಲು ಹಾಡುವುದು ಒಂದು ಔಷಧಿ. ಪ್ರದರ್ಶನಕ್ಕಲ್ಲದಿದ್ದರೂ ನಮ್ಮ ಖುಷಿಗಾಗಿಯಾದರು ವಾದ್ಯವನ್ನು, ಹಾಡುವುದನ್ನು ಕಲಿಯಬೇಕು. ತುಂಬಾ ನೊಂದವರು ನೋವಿನಿಂದ ಹೋರಬರಲು ವಾದ್ಯ ಬಳಸುತ್ತಿದ್ದರು” ಎಂದು ಹೇಳುತ್ತಾ ಜಾನಪದ ತರಬೇತಿಯ ಉದ್ದೇಶ ಹಾಗೂ ಸ್ಪರ್ಧೆಯು ಯಾವರೀತಿ ನಡೆಯುತ್ತದೆ ಎಂದು ತಿಳಿಸಿದರು.
ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಿವಾಕರ್ ನಾಗ್ ರವರು ಶಿಬಿರಾರ್ಥಿಗಳಿಗೆ ಜಾನಪದ ವಾದ್ಯಗಳಾದ ತಮಟೆ, ಚೌಡಿಕೆ, ಗೆಜ್ಜೆ, ದಮಡಿ, ಡಮರುಗ ಮುಂತಾದ ವಾದ್ಯಗಳ ಪರಿಚಯ ಮಾಡಿ ನಂತರ ಮೂಲ ಜಾನಪದ ಗೀತೆಯ ಇತಿಹಾಸವನ್ನು ತಿಳಿಸಿ ತರಬೇತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ, ಡಾ. ಭಾರತಿ ಸಾರ್ಮಾಜ್, ಡಾ. ನಂಜಪ್ಪ, ಡಾ.ಮಂಜುಳಮ್ಮ, ಮಹದೇವಯ್ಯ ಕೆ.ಎಂ, ದಿವ್ಯಶ್ರೀ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ಸಂಧ್ಯಾ ಮತ್ತು ನವೀನ್ ಉಪಸ್ಥಿತರಿದ್ದರು.
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…
ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…
ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…
ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…