ಜಾನಪದ ವಾದ್ಯ, ಜಾನಪದ ಗೀತೆ ಹಾಗೂ ಜಾನಪದ ನೃತ್ಯಗಳ ತರಬೇತಿ ಶಿಬಿರಕ್ಕೆ ಚಾಲನೆ

ಜಿಲ್ಲಾಡಳಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಯುವಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಚಲನ(ರಿ.) ಸಹಯೋಗದೊಂದಿಗೆ ಜಾನಪದ ವಾದ್ಯ, ಜಾನಪದ ಗೀತೆ ಹಾಗೂ ಜಾನಪದ ನೃತ್ಯಗಳ ತರಬೇತಿ ಶಿಬಿರಕ್ಕೆ ನ. 4ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಾನಪದ ವಾಧ್ಯವನ್ನು ನುಡಿಸುವ ಮೂಲಕ ಉದ್ಘಾಟಿಸಲಾಯಿತು.

ಯುವ ಸಂಚಲನದ ಅಧ್ಯಕ್ಷರಾದ ಚಿದಾನಂದ ಮೂರ್ತಿಯವರು ಮಾತನಾಡಿ, “ಬಾಯಿಂದ ಬಾಯಿಗೆ ತಲುಪಿರುವ ಕಾರಣ ಜಾನಪದವು ಇನ್ನು ಉಳಿದಿದೆ. ಆದರೆ, ಈಗ ಜಾನಪದದ ಸ್ವರೂಪ ಬದಲಾಗಿ ಆಧುನಿಕ ಸಂಗೀತದ ಜೊತೆ ಸೇರಿ ಮೊಬೈಲ್ ಇಂದ ಮೊಬೈಲ್ ಗೆ ಫಾರ್ವರ್ಡ್ ಆಗುತ್ತಿದೆ. ಎಲ್ಲಾ ಹಾಡುಗಳಿಗೂ ಇತಿಹಾಸವಿರುತ್ತದೆ. ಹಾಡುಗಳಿಗೂ ಆರೋಗ್ಯಕ್ಕೂ ನೇರವಾಗಿ ಸಂಬಂಧವಿರುತ್ತದೆ. ಮಾನಸಿಕ ಖಿನ್ನತೆಯಿಂದ ಹೊರಬರಲು ಹಾಡುವುದು ಒಂದು ಔಷಧಿ. ಪ್ರದರ್ಶನಕ್ಕಲ್ಲದಿದ್ದರೂ ನಮ್ಮ ಖುಷಿಗಾಗಿಯಾದರು ವಾದ್ಯವನ್ನು, ಹಾಡುವುದನ್ನು ಕಲಿಯಬೇಕು. ತುಂಬಾ ನೊಂದವರು ನೋವಿನಿಂದ ಹೋರಬರಲು ವಾದ್ಯ ಬಳಸುತ್ತಿದ್ದರು” ಎಂದು ಹೇಳುತ್ತಾ ಜಾನಪದ ತರಬೇತಿಯ ಉದ್ದೇಶ ಹಾಗೂ ಸ್ಪರ್ಧೆಯು ಯಾವರೀತಿ ನಡೆಯುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ. ಸುದರ್ಶನ್ ರವರು ಮಾತನಾಡಿ, “ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಕರಿಗೆ ಶಕ್ತಿ ತುಂಬುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ಜೀವನವನ್ನು ರೂಪಿಸಿಕೊಳ್ಳಲು ಡಿಗ್ರಿಗಳು ಒಂದೇ ಮುಖ್ಯವಲ್ಲ ಎಲ್ಲಾ ರೀತಿಯ ಚಟುವಟಿಕೆಗಳನ್ನು ಮಾಡಬೇಕು. ಎಲ್ಲದರಲ್ಲೂ ಸಂಪಾದನೆ ಇರುತ್ತದೆ. ಜಾನಪದ ವಾದ್ಯ, ಗೀತೆ ಇವುಗಳಿಗೆ ಪ್ರತ್ಯೇಕ ವಿಶ್ವ ವಿದ್ಯಾನಿಲಯಗಳು ಇದ್ದು ನೀಮಗೆ ಆಸಕ್ತಿ ಇದ್ದರೆ ಇವುಗಳ ಮೇಲೆ ಪದವಿಗಳನ್ನು ಸಹ ಪಡೆಯಬಹುದು. ವಿದ್ಯಾಭ್ಯಾಸದ ಜೊತೆಗೆ ಬೇರೆ ಆಸಕ್ತಿಗಳನ್ನು ಬೆಳೆಸಿಕೊಳ್ಳುವುದು ಮುಖ್ಯ. ಎಲ್ಲರು ಈ ಶಿಬಿರದ ಪ್ರಯೋಜನ ಪಡೆಯಬೇಕು ” ಎಂದು ಹೇಳಿದರು.

ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಿವಾಕರ್ ನಾಗ್ ರವರು ಶಿಬಿರಾರ್ಥಿಗಳಿಗೆ ಜಾನಪದ ವಾದ್ಯಗಳಾದ ತಮಟೆ, ಚೌಡಿಕೆ, ಗೆಜ್ಜೆ, ದಮಡಿ, ಡಮರುಗ ಮುಂತಾದ ವಾದ್ಯಗಳ ಪರಿಚಯ ಮಾಡಿ ನಂತರ ಮೂಲ ಜಾನಪದ ಗೀತೆಯ ಇತಿಹಾಸವನ್ನು ತಿಳಿಸಿ ತರಬೇತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ, ಡಾ. ಭಾರತಿ ಸಾರ್ಮಾಜ್, ಡಾ. ನಂಜಪ್ಪ, ಡಾ.ಮಂಜುಳಮ್ಮ, ಮಹದೇವಯ್ಯ ಕೆ.ಎಂ, ದಿವ್ಯಶ್ರೀ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ಸಂಧ್ಯಾ ಮತ್ತು ನವೀನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

7 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

23 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

24 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago