ಜಿಲ್ಲಾಡಳಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಯುವಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಚಲನ(ರಿ.) ಸಹಯೋಗದೊಂದಿಗೆ ಜಾನಪದ ವಾದ್ಯ, ಜಾನಪದ ಗೀತೆ ಹಾಗೂ ಜಾನಪದ ನೃತ್ಯಗಳ ತರಬೇತಿ ಶಿಬಿರಕ್ಕೆ ನ. 4ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಾನಪದ ವಾಧ್ಯವನ್ನು ನುಡಿಸುವ ಮೂಲಕ ಉದ್ಘಾಟಿಸಲಾಯಿತು.
ಯುವ ಸಂಚಲನದ ಅಧ್ಯಕ್ಷರಾದ ಚಿದಾನಂದ ಮೂರ್ತಿಯವರು ಮಾತನಾಡಿ, “ಬಾಯಿಂದ ಬಾಯಿಗೆ ತಲುಪಿರುವ ಕಾರಣ ಜಾನಪದವು ಇನ್ನು ಉಳಿದಿದೆ. ಆದರೆ, ಈಗ ಜಾನಪದದ ಸ್ವರೂಪ ಬದಲಾಗಿ ಆಧುನಿಕ ಸಂಗೀತದ ಜೊತೆ ಸೇರಿ ಮೊಬೈಲ್ ಇಂದ ಮೊಬೈಲ್ ಗೆ ಫಾರ್ವರ್ಡ್ ಆಗುತ್ತಿದೆ. ಎಲ್ಲಾ ಹಾಡುಗಳಿಗೂ ಇತಿಹಾಸವಿರುತ್ತದೆ. ಹಾಡುಗಳಿಗೂ ಆರೋಗ್ಯಕ್ಕೂ ನೇರವಾಗಿ ಸಂಬಂಧವಿರುತ್ತದೆ. ಮಾನಸಿಕ ಖಿನ್ನತೆಯಿಂದ ಹೊರಬರಲು ಹಾಡುವುದು ಒಂದು ಔಷಧಿ. ಪ್ರದರ್ಶನಕ್ಕಲ್ಲದಿದ್ದರೂ ನಮ್ಮ ಖುಷಿಗಾಗಿಯಾದರು ವಾದ್ಯವನ್ನು, ಹಾಡುವುದನ್ನು ಕಲಿಯಬೇಕು. ತುಂಬಾ ನೊಂದವರು ನೋವಿನಿಂದ ಹೋರಬರಲು ವಾದ್ಯ ಬಳಸುತ್ತಿದ್ದರು” ಎಂದು ಹೇಳುತ್ತಾ ಜಾನಪದ ತರಬೇತಿಯ ಉದ್ದೇಶ ಹಾಗೂ ಸ್ಪರ್ಧೆಯು ಯಾವರೀತಿ ನಡೆಯುತ್ತದೆ ಎಂದು ತಿಳಿಸಿದರು.
ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಿವಾಕರ್ ನಾಗ್ ರವರು ಶಿಬಿರಾರ್ಥಿಗಳಿಗೆ ಜಾನಪದ ವಾದ್ಯಗಳಾದ ತಮಟೆ, ಚೌಡಿಕೆ, ಗೆಜ್ಜೆ, ದಮಡಿ, ಡಮರುಗ ಮುಂತಾದ ವಾದ್ಯಗಳ ಪರಿಚಯ ಮಾಡಿ ನಂತರ ಮೂಲ ಜಾನಪದ ಗೀತೆಯ ಇತಿಹಾಸವನ್ನು ತಿಳಿಸಿ ತರಬೇತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ, ಡಾ. ಭಾರತಿ ಸಾರ್ಮಾಜ್, ಡಾ. ನಂಜಪ್ಪ, ಡಾ.ಮಂಜುಳಮ್ಮ, ಮಹದೇವಯ್ಯ ಕೆ.ಎಂ, ದಿವ್ಯಶ್ರೀ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ಸಂಧ್ಯಾ ಮತ್ತು ನವೀನ್ ಉಪಸ್ಥಿತರಿದ್ದರು.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…