ಜಾನಪದ ವಾದ್ಯ, ಜಾನಪದ ಗೀತೆ ಹಾಗೂ ಜಾನಪದ ನೃತ್ಯಗಳ ತರಬೇತಿ ಶಿಬಿರಕ್ಕೆ ಚಾಲನೆ

ಜಿಲ್ಲಾಡಳಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಯುವಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಚಲನ(ರಿ.) ಸಹಯೋಗದೊಂದಿಗೆ ಜಾನಪದ ವಾದ್ಯ, ಜಾನಪದ ಗೀತೆ ಹಾಗೂ ಜಾನಪದ ನೃತ್ಯಗಳ ತರಬೇತಿ ಶಿಬಿರಕ್ಕೆ ನ. 4ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಾನಪದ ವಾಧ್ಯವನ್ನು ನುಡಿಸುವ ಮೂಲಕ ಉದ್ಘಾಟಿಸಲಾಯಿತು.

ಯುವ ಸಂಚಲನದ ಅಧ್ಯಕ್ಷರಾದ ಚಿದಾನಂದ ಮೂರ್ತಿಯವರು ಮಾತನಾಡಿ, “ಬಾಯಿಂದ ಬಾಯಿಗೆ ತಲುಪಿರುವ ಕಾರಣ ಜಾನಪದವು ಇನ್ನು ಉಳಿದಿದೆ. ಆದರೆ, ಈಗ ಜಾನಪದದ ಸ್ವರೂಪ ಬದಲಾಗಿ ಆಧುನಿಕ ಸಂಗೀತದ ಜೊತೆ ಸೇರಿ ಮೊಬೈಲ್ ಇಂದ ಮೊಬೈಲ್ ಗೆ ಫಾರ್ವರ್ಡ್ ಆಗುತ್ತಿದೆ. ಎಲ್ಲಾ ಹಾಡುಗಳಿಗೂ ಇತಿಹಾಸವಿರುತ್ತದೆ. ಹಾಡುಗಳಿಗೂ ಆರೋಗ್ಯಕ್ಕೂ ನೇರವಾಗಿ ಸಂಬಂಧವಿರುತ್ತದೆ. ಮಾನಸಿಕ ಖಿನ್ನತೆಯಿಂದ ಹೊರಬರಲು ಹಾಡುವುದು ಒಂದು ಔಷಧಿ. ಪ್ರದರ್ಶನಕ್ಕಲ್ಲದಿದ್ದರೂ ನಮ್ಮ ಖುಷಿಗಾಗಿಯಾದರು ವಾದ್ಯವನ್ನು, ಹಾಡುವುದನ್ನು ಕಲಿಯಬೇಕು. ತುಂಬಾ ನೊಂದವರು ನೋವಿನಿಂದ ಹೋರಬರಲು ವಾದ್ಯ ಬಳಸುತ್ತಿದ್ದರು” ಎಂದು ಹೇಳುತ್ತಾ ಜಾನಪದ ತರಬೇತಿಯ ಉದ್ದೇಶ ಹಾಗೂ ಸ್ಪರ್ಧೆಯು ಯಾವರೀತಿ ನಡೆಯುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ. ಸುದರ್ಶನ್ ರವರು ಮಾತನಾಡಿ, “ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಕರಿಗೆ ಶಕ್ತಿ ತುಂಬುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ಜೀವನವನ್ನು ರೂಪಿಸಿಕೊಳ್ಳಲು ಡಿಗ್ರಿಗಳು ಒಂದೇ ಮುಖ್ಯವಲ್ಲ ಎಲ್ಲಾ ರೀತಿಯ ಚಟುವಟಿಕೆಗಳನ್ನು ಮಾಡಬೇಕು. ಎಲ್ಲದರಲ್ಲೂ ಸಂಪಾದನೆ ಇರುತ್ತದೆ. ಜಾನಪದ ವಾದ್ಯ, ಗೀತೆ ಇವುಗಳಿಗೆ ಪ್ರತ್ಯೇಕ ವಿಶ್ವ ವಿದ್ಯಾನಿಲಯಗಳು ಇದ್ದು ನೀಮಗೆ ಆಸಕ್ತಿ ಇದ್ದರೆ ಇವುಗಳ ಮೇಲೆ ಪದವಿಗಳನ್ನು ಸಹ ಪಡೆಯಬಹುದು. ವಿದ್ಯಾಭ್ಯಾಸದ ಜೊತೆಗೆ ಬೇರೆ ಆಸಕ್ತಿಗಳನ್ನು ಬೆಳೆಸಿಕೊಳ್ಳುವುದು ಮುಖ್ಯ. ಎಲ್ಲರು ಈ ಶಿಬಿರದ ಪ್ರಯೋಜನ ಪಡೆಯಬೇಕು ” ಎಂದು ಹೇಳಿದರು.

ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಿವಾಕರ್ ನಾಗ್ ರವರು ಶಿಬಿರಾರ್ಥಿಗಳಿಗೆ ಜಾನಪದ ವಾದ್ಯಗಳಾದ ತಮಟೆ, ಚೌಡಿಕೆ, ಗೆಜ್ಜೆ, ದಮಡಿ, ಡಮರುಗ ಮುಂತಾದ ವಾದ್ಯಗಳ ಪರಿಚಯ ಮಾಡಿ ನಂತರ ಮೂಲ ಜಾನಪದ ಗೀತೆಯ ಇತಿಹಾಸವನ್ನು ತಿಳಿಸಿ ತರಬೇತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ, ಡಾ. ಭಾರತಿ ಸಾರ್ಮಾಜ್, ಡಾ. ನಂಜಪ್ಪ, ಡಾ.ಮಂಜುಳಮ್ಮ, ಮಹದೇವಯ್ಯ ಕೆ.ಎಂ, ದಿವ್ಯಶ್ರೀ ಹಾಗೂ ಯುವ ಸಂಚಲನ ತಂಡದ ಸದಸ್ಯರಾದ ಸಂಧ್ಯಾ ಮತ್ತು ನವೀನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

6 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

8 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

9 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

10 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

11 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

17 hours ago