ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್ ರಾಡ್ , ಸ್ಪಾನರ್ ನಿಂದ ಹಲ್ಲೆ ಮಾಡಿ 8 ಜನರಿಗೆ ಬೇಲ್ ಕೊಡಿಸಬೇಕು ಹಾಗೂ 5 ಲಕ್ಷ ಹಣ ತಂದುಕೊಡಬೇಕೆಂದು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ರೌಡಿ ಶೀಟರ್ ರಾಜೇಶ್ @ ಕೋಳಿ ರಾಜೇಶ್, ಹರ್ಷಿತ್@ಆಪಲ್, ಜಾನ್, ಭರತ್.
ಬೆಳಗಿನ ಜಾವದವರೆಗೂ ಹಲ್ಲೆ ನಡೆಸಿ 10 ಸಾವಿರ ಹಣ ಪೀಕಿದ್ದ ಆರೋಪಿಗಳು. ಈ ವಿಷಯ ಪೊಲೀಸರಿಗೆ ಹೇಳಿದರೆ ಅಥವಾ ಹಣ ಕೊಡದಿದ್ದರೆ ಹುಡುಗರನ್ನ ಬಿಟ್ಟು ಕೊಲೆ ಮಾಡಿಸೋದಾಗಿ ಬೆದರಿಕೆಯನ್ನ ಹಾಕಿದ್ದ ರೌಡಿಗಳು.
ವಕೀಲರ ದೂರಿನನ್ವಯ ಕೋಳಿ ರಾಜೇಶ್ , ಹರ್ಷಿತ್@ ಆಪಲ್ ಬಂಧನ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…