ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ: ಸತತ 4ನೇ ವರ್ಷವೂ 23 ಪಾರಿತೋಷಕಗಳೊಂದಿಗೆ ಅಗ್ರಸ್ಥಾನ ಪಡೆದ ಸಾಧನೆ

ದೊಡ್ಡಬಳ್ಳಾಪುರ ನಗರದ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ಗೆ 2024-25ನೇ ಸಾಲಿನ ಅತ್ಯುತ್ತಮ ಲಯನ್ಸ್ ಸಂಸ್ಥೆ ಪುರಸ್ಕಾರ ಲಭಿಸಿದೆ ಎಂದು ಕ್ಲಬ್‌ನ ನಿರ್ಗಮಿತ ಅಧ್ಯಕ್ಷ ಜೆ.ಆರ್.ರಾಕೇಶ್‌ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಲಯನ್ಸ್ ಜಿಲ್ಲೆ 317ಎಫ್ ವ್ಯಾಪ್ತಿಯ 88 ಲಯನ್ಸ್ ಸಂಸ್ಥೆಗಳ ಪೈಕಿ ಸೇವಾ ಹಾಗೂ ಆಡಳಿತಾತ್ಮಕ ಕಾರ್‍ಯಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 23 ಮಹತ್ವದ ಪಾರಿತೋಷಕಗಳನ್ನು ಪಡೆದಿದೆ. ಕಳೆದ 4 ವರ್ಷಗಳ ಹಿಂದೆಯಷ್ಟೇ ಸ್ಥಾಪನೆಯಾದ ಈ ಸಂಸ್ಥೆ ಸತತ 4ನೇ ಬಾರಿಯೂ ಅತ್ಯುತ್ತಮ ಲಯನ್ಸ್ ಕ್ಲಬ್ ಪುರಸ್ಕಾರ ಪಡೆಯುತ್ತಿರುವುದು ಮಹತ್ವದ ಸಾಧನೆಯಾಗಿದೆ. ಈ ಹಂತದಲ್ಲಿ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಸಹಕಾರವೂ ಪ್ರಮುಖವಾದದ್ದು. ಮಹತ್ವದ ಸಾಧನೆಯಲ್ಲಿ ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.

ಲಯನ್ಸ್‌ ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್‌ ಮಾತನಾಡಿ, ಸತತ 4ನೇ ಬಾರಿಗೆ ಅತ್ಯುತ್ತಮ ಕ್ಲಬ್‌ ಪುರಸ್ಕಾರಕ್ಕೆ ಪಾತ್ರವಾಗಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ನಂಬರ್‌ 1 ಉತ್ತಮ ಕ್ಲಬ್‌ ಪುರಸ್ಕಾರ, ಉತ್ತಮ ಅಧ್ಯಕ್ಷ, ಖಜಾಂಚಿ ಪ್ಲಾಟಿನಂ ಪುರಸ್ಕಾರ, ಉತ್ತಮ ಕಾರ್ಯದರ್ಶಿ ಡೈಮಂಡ್‌ ಪುರಸ್ಕಾರ ಸೇರಿದಂತೆ ಜಿಇಟಿ ಸಂಯೋಜಕ, ಡಿಸಿ ಮಧುಮೇಹ, ಮಧುಮೇಹ ತಪಾಸಣೆ, ದೃಷ್ಟಿ ತಪಾಸಣೆ-ಚಿಕಿತ್ಸೆ, ಹಸಿವು ನಿವಾರಣೆ, ಕ್ಲಬ್‌ ವಿಸ್ತರಣೆ, ಮಾನವೀಯ ಸೇವೆ, ಸ್ಕಾಪ್‌ಬುಕ್‌, ಕ್ವೆಸ್ಟ್‌ ವಿಭಾಗಗಳಲ್ಲಿ ಪ್ಲಾಟಿನಂ, ದಂತ ತಪಾಸಣೆ, ಪರಿಸರ, ಫೂಟ್‌ಪಲ್ಸ್‌ ಥೆರಪಿಯಲ್ಲಿ ಡೈಮಂಡ್, ಇಮೇಜ್‌ ಬಿಲ್ಡಿಂಗ್, ಸ್ವಚ್ಛಭಾರತ್‌ ಅಭಿಯಾನ, ಆರೋಗ್ಯ ಶಿಬಿರಗಳು, ಯುವ ಸಬಲೀಕರಣ, ರಕ್ತದಾನ ವಿಭಾಗಗಳಲ್ಲಿ ಸುವರ್ಣ ಹಾಗೂ ಪಶುವೈದ್ಯಕೀಯ ವಿಭಾಗದಲ್ಲಿ ಬೆಳ್ಳಿ ಪುರಸ್ಕಾರಗಳನ್ನು ಸಂಸ್ಥೆ ಪಡೆದಿದೆ ಎಂದು ವಿವರಿಸಿದರು.

ಕ್ಲಬ್‌ನ ನಿಯೋಜಿತ ಅಧ್ಯಕ್ಷ ಪ್ರೊ.ರವಿಕಿರಣ್‌.ಕೆ.ಆರ್ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಕ್ಲಬ್‌ನ ಸೇವಾ ಕಾರ್ಯಗಳ ಮೂಲಕ ತಲುಪಲಾಗಿದೆ. ಪ್ರಸಕ್ತ ಅವಧಿಯಲ್ಲಿ ಜೆ.ಆರ್.ರಾಕೇಶ್‌ ಅವರ ನೇತೃತ್ವದಲ್ಲಿ ನಡೆಸಿದ ಸೇವಾ ಕಾರ್ಯಗಳು ಗಣನೀಯ. ಮಧುಮೇಹ ವಿಶೇಷ ಕ್ಲಬ್‌ ಆಗಿ ನೊಂದಾಯಿತವಾಗಿರುವ ಸಂಸ್ಥೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸೇವಾ ಕಾರ್ಯಗಳು ನಡೆಯುತ್ತಿವೆ. ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಸಹಯೋಗದಲ್ಲೂ ಮಹತ್ವದ ಯೋಜನೆಗಳು ಅನುಷ್ಠಾನಗೊಂಡಿವೆ. ಜಿಲ್ಲೆ 317ಎಫ್‌ನ ಹಲವು ಮುಖಂಡರ ಮಾರ್ಗದರ್ಶನವೂ ಗಣನೀಯ ಎಂದು ತಿಳಿಸಿದರು.

*ಜಿಲ್ಲಾ ರಾಜ್ಯಪಾಲರಿಂದ ಪುರಸ್ಕಾರ:*

ಬೆಂಗಳೂರಿನ ಹೆಬ್ಬಾಳ ಬಳಿಯ ಯುಎಎಸ್ ಕ್ಯಾಂಪಸ್ ಸಭಾಂಗಣದಲ್ಲಿ ನಡೆದ ಜಿಲ್ಲೆ317ಎಫ್‌ನ 2024-25ನೇ ಸಾಲಿನ ಪುರಸ್ಕಾರ ಪ್ರದಾನ, ಅಭಿನಂದನಾ ಕಾರ್‍ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ಸಿ.ಎಂ.ನಾರಾಯಣಸ್ವಾಮಿ, ಅತ್ಯುತ್ತಮ ಲಯನ್ಸ್ ಕ್ಲಬ್ ಬ್ಯಾನರ್ ಅನ್ನು ಸಂಸ್ಥೆಯ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಇದೇ ವೇಳೆ ವಿವಿಧ 23 ಪಾರಿತೋಷಕಗಳನ್ನು ಪ್ರದಾನ ಮಾಡಲಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಲಯನ್ಸ್‌ ಜಿಲ್ಲಾ ಮಧುಮೇಹ ಸಂಯೋಜಕ ಎಲ್.ಎನ್.ಪ್ರದೀಪ್‌ಕುಮಾರ್‌, ಲಯನ್ಸ್‌ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ಎಸ್.ರವಿಕುಮಾರ್, ನಿಕಟಪೂರ್ವ ಅಧ್ಯಕ್ಷ ಡಾ.ಎಂ.ಶ್ರೀನಿವಾಸರೆಡ್ಡಿ, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಲಯನ್ಸ್‌ ಉಪಾಧ್ಯಕ್ಷ ಮುನಿರಾಮೇಗೌಡ, ನಿಯೋಜಿತ ಕಾರ್ಯದರ್ಶಿ ಸುಮಾ ಪ್ರಸನ್ನ, ಮುಕೇಶ್, ಪದಾಧಿಕಾರಿಗಳಾದ ವರದರಾಜು, ವೀಣಾ, ಬಾಬುಸಾಬಿ, ಜಿಯಾವುಲ್ಲಾಖಾನ್, ಅರುಂಧತಿ, ಲಕ್ಷ್ಮಿಶ್ರೀನಿವಾಸ್, ಪ್ರಸನ್ನಕುಮಾರ್, ಹರ್ಷ, ಮಂಜುನಾಥ್, ಕಾವ್ಯ, ಮಂಜುಳಾ, ರೋಜಾ, ವೆಂಕಟೇಶ್, ರಮೇಶ್, ರಾಘವೇಂದ್ರಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

5 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

13 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

23 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago