ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು


ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಹೆದ್ದಾರಿ ದಾಟಲು ಯತ್ನಿಸುತ್ತಿದ್ದ ವೇಳೆ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಜಿಂಕೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.

ಜಿಂಕೆಗೆ ಡಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

1 hour ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

12 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

13 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago