ಜಿಂಕೆಬಚ್ಚಹಳ್ಳಿಯಲ್ಲಿ ಅಷ್ಟಲಕ್ಷ್ಮೀದೇವಿಯವರ ಉತ್ಸವ; ಉತ್ಸವದ ಬಳಿಕ ಹೊರಬೀಳುತ್ತಾ ಬಿ.ಸಿ.ಆನಂದ್ ಕುಮಾರ್ ನಡೆ

ನಾಳೆಯಿಂದ ಎರಡು ದಿನಗಳ ಕಾಲ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಊರಿನ ಗ್ರಾಮಸ್ಥರಿಂದ ಶ್ರೀ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅಷ್ಟಲಕ್ಷ್ಮೀದೇವಿಯವರಾದ ಸಪ್ಪಲ್ಲಮ್ಮ ದೇವಿ, ಪಟಾಲಮ್ಮ ದೇವಿ, ವಿದ್ಯಾಚೌಡೇಶ್ವರಿ ತಾಯಿ, ದೊಡ್ಡಮ್ಮ ತಾಯಿ, ಪಳೇಕಮ್ಮ ತಾಯಿ, ಖಡ್ಗ ಮಹೇಶ್ವರಮ್ಮ ತಾಯಿ, ಮುತ್ಯಾಲಮ್ಮ ತಾಯಿ, ಮಾರಮ್ಮ ತಾಯಿ, ಯಲ್ಲಮ್ಮ ತಾಯಿ, ಕಾಳಮ್ಮ ತಾಯಿ, ಕೆಂಪಮ್ಮ ದೇವಿ, ಗಂಗಮ್ಮ ತಾಯಿ, ಮಹೇಶ್ವರಮ್ಮ ತಾಯಿ, ಚಿಕ್ಕ ಮಾರಮ್ಮ ತಾಯಿ, ನಲ್ಡಿ ಮಾರಮ್ಮ ತಾಯಿ ದೇವರುಗಳನ್ನು ಪೂಜಾ – ಕೈಂಕರ್ಯಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ, ಕುಂಭಾಭಿಷೇಕ ಮೂಲಕ ಕರೆತರಲಾಗುವುದು.

ಬಳಿಕ ಅಷ್ಟ ಲಕ್ಷ್ಮೀದೇವಿಯವರಿಗೆ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಮಹಾಮಂಗಳಾರತಿ ನೇರವೇರಲಿದೆ. ಸಂಜೆ 6 ಗಂಟೆ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳಿಕ ರಸಮಂಜರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಬುಧವಾರ ವಿಶೇಷ ಪೂಜಾಕಾರ್ಯಕ್ರಮಗಳನ್ನು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ಬಳಿಕ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ.

ಎಲ್ಲರ ಚಿತ್ತ ಬಿ.ಸಿ.ಆನಂದ್ ಕುಮಾರ್ ನಡೆಯತ್ತ:

ಸಾರ್ವತ್ರಿಕ ಚುನಾವಣೆಯ ಬಿಸಿ ಕಾವೇರುತ್ತಿದ್ದು, ಜಿಂಕೆ ಬಚ್ಚಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಬಿ.ಸಿ ಆನಂದ್ ಕುಮಾರ್ ರಾಜಕೀಯ ನಡೆ/ತೀರ್ಮಾನ ತೀವ್ರ ಕುತೂಹಲ ಕೆರಳಿಸಿದೆ. ಊರಿನಲ್ಲಿ ನಡೆಯುತ್ತಿರುವ ದೇವಿಯವರ ಉತ್ಸವದ ಬಳಿಕ ಸೂಕ್ತ ತೀರ್ಮಾನ ಪ್ರಕಟಿಸಿಲಿದ್ದಾರೆ ಎಂದು ಬಿಸಿ ಆನಂದ್ ಕುಮಾರ್ ಆಪ್ತ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 hour ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

2 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

7 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

19 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

20 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

20 hours ago