ಜಿಂಕೆಬಚ್ಚಹಳ್ಳಿಯಲ್ಲಿ ಅಷ್ಟಲಕ್ಷ್ಮೀದೇವಿಯವರ ಉತ್ಸವ; ಉತ್ಸವದ ಬಳಿಕ ಹೊರಬೀಳುತ್ತಾ ಬಿ.ಸಿ.ಆನಂದ್ ಕುಮಾರ್ ನಡೆ

ನಾಳೆಯಿಂದ ಎರಡು ದಿನಗಳ ಕಾಲ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಊರಿನ ಗ್ರಾಮಸ್ಥರಿಂದ ಶ್ರೀ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅಷ್ಟಲಕ್ಷ್ಮೀದೇವಿಯವರಾದ ಸಪ್ಪಲ್ಲಮ್ಮ ದೇವಿ, ಪಟಾಲಮ್ಮ ದೇವಿ, ವಿದ್ಯಾಚೌಡೇಶ್ವರಿ ತಾಯಿ, ದೊಡ್ಡಮ್ಮ ತಾಯಿ, ಪಳೇಕಮ್ಮ ತಾಯಿ, ಖಡ್ಗ ಮಹೇಶ್ವರಮ್ಮ ತಾಯಿ, ಮುತ್ಯಾಲಮ್ಮ ತಾಯಿ, ಮಾರಮ್ಮ ತಾಯಿ, ಯಲ್ಲಮ್ಮ ತಾಯಿ, ಕಾಳಮ್ಮ ತಾಯಿ, ಕೆಂಪಮ್ಮ ದೇವಿ, ಗಂಗಮ್ಮ ತಾಯಿ, ಮಹೇಶ್ವರಮ್ಮ ತಾಯಿ, ಚಿಕ್ಕ ಮಾರಮ್ಮ ತಾಯಿ, ನಲ್ಡಿ ಮಾರಮ್ಮ ತಾಯಿ ದೇವರುಗಳನ್ನು ಪೂಜಾ – ಕೈಂಕರ್ಯಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ, ಕುಂಭಾಭಿಷೇಕ ಮೂಲಕ ಕರೆತರಲಾಗುವುದು.

ಬಳಿಕ ಅಷ್ಟ ಲಕ್ಷ್ಮೀದೇವಿಯವರಿಗೆ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಮಹಾಮಂಗಳಾರತಿ ನೇರವೇರಲಿದೆ. ಸಂಜೆ 6 ಗಂಟೆ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳಿಕ ರಸಮಂಜರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಬುಧವಾರ ವಿಶೇಷ ಪೂಜಾಕಾರ್ಯಕ್ರಮಗಳನ್ನು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ಬಳಿಕ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ.

ಎಲ್ಲರ ಚಿತ್ತ ಬಿ.ಸಿ.ಆನಂದ್ ಕುಮಾರ್ ನಡೆಯತ್ತ:

ಸಾರ್ವತ್ರಿಕ ಚುನಾವಣೆಯ ಬಿಸಿ ಕಾವೇರುತ್ತಿದ್ದು, ಜಿಂಕೆ ಬಚ್ಚಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಬಿ.ಸಿ ಆನಂದ್ ಕುಮಾರ್ ರಾಜಕೀಯ ನಡೆ/ತೀರ್ಮಾನ ತೀವ್ರ ಕುತೂಹಲ ಕೆರಳಿಸಿದೆ. ಊರಿನಲ್ಲಿ ನಡೆಯುತ್ತಿರುವ ದೇವಿಯವರ ಉತ್ಸವದ ಬಳಿಕ ಸೂಕ್ತ ತೀರ್ಮಾನ ಪ್ರಕಟಿಸಿಲಿದ್ದಾರೆ ಎಂದು ಬಿಸಿ ಆನಂದ್ ಕುಮಾರ್ ಆಪ್ತ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

51 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

4 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

15 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

16 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

20 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

21 hours ago