ಜಿಂಕೆಬಚ್ಚಹಳ್ಳಿಯಲ್ಲಿ ಅಷ್ಟಲಕ್ಷ್ಮೀದೇವಿಯವರ ಉತ್ಸವ; ಉತ್ಸವದ ಬಳಿಕ ಹೊರಬೀಳುತ್ತಾ ಬಿ.ಸಿ.ಆನಂದ್ ಕುಮಾರ್ ನಡೆ

ನಾಳೆಯಿಂದ ಎರಡು ದಿನಗಳ ಕಾಲ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಊರಿನ ಗ್ರಾಮಸ್ಥರಿಂದ ಶ್ರೀ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅಷ್ಟಲಕ್ಷ್ಮೀದೇವಿಯವರಾದ ಸಪ್ಪಲ್ಲಮ್ಮ ದೇವಿ, ಪಟಾಲಮ್ಮ ದೇವಿ, ವಿದ್ಯಾಚೌಡೇಶ್ವರಿ ತಾಯಿ, ದೊಡ್ಡಮ್ಮ ತಾಯಿ, ಪಳೇಕಮ್ಮ ತಾಯಿ, ಖಡ್ಗ ಮಹೇಶ್ವರಮ್ಮ ತಾಯಿ, ಮುತ್ಯಾಲಮ್ಮ ತಾಯಿ, ಮಾರಮ್ಮ ತಾಯಿ, ಯಲ್ಲಮ್ಮ ತಾಯಿ, ಕಾಳಮ್ಮ ತಾಯಿ, ಕೆಂಪಮ್ಮ ದೇವಿ, ಗಂಗಮ್ಮ ತಾಯಿ, ಮಹೇಶ್ವರಮ್ಮ ತಾಯಿ, ಚಿಕ್ಕ ಮಾರಮ್ಮ ತಾಯಿ, ನಲ್ಡಿ ಮಾರಮ್ಮ ತಾಯಿ ದೇವರುಗಳನ್ನು ಪೂಜಾ – ಕೈಂಕರ್ಯಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ, ಕುಂಭಾಭಿಷೇಕ ಮೂಲಕ ಕರೆತರಲಾಗುವುದು.

ಬಳಿಕ ಅಷ್ಟ ಲಕ್ಷ್ಮೀದೇವಿಯವರಿಗೆ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಮಹಾಮಂಗಳಾರತಿ ನೇರವೇರಲಿದೆ. ಸಂಜೆ 6 ಗಂಟೆ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳಿಕ ರಸಮಂಜರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಬುಧವಾರ ವಿಶೇಷ ಪೂಜಾಕಾರ್ಯಕ್ರಮಗಳನ್ನು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ಬಳಿಕ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ.

ಎಲ್ಲರ ಚಿತ್ತ ಬಿ.ಸಿ.ಆನಂದ್ ಕುಮಾರ್ ನಡೆಯತ್ತ:

ಸಾರ್ವತ್ರಿಕ ಚುನಾವಣೆಯ ಬಿಸಿ ಕಾವೇರುತ್ತಿದ್ದು, ಜಿಂಕೆ ಬಚ್ಚಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಬಿ.ಸಿ ಆನಂದ್ ಕುಮಾರ್ ರಾಜಕೀಯ ನಡೆ/ತೀರ್ಮಾನ ತೀವ್ರ ಕುತೂಹಲ ಕೆರಳಿಸಿದೆ. ಊರಿನಲ್ಲಿ ನಡೆಯುತ್ತಿರುವ ದೇವಿಯವರ ಉತ್ಸವದ ಬಳಿಕ ಸೂಕ್ತ ತೀರ್ಮಾನ ಪ್ರಕಟಿಸಿಲಿದ್ದಾರೆ ಎಂದು ಬಿಸಿ ಆನಂದ್ ಕುಮಾರ್ ಆಪ್ತ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

5 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

9 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

16 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

17 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago