ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ನಿನ್ನೆ ದೇವಾಲಯದಲ್ಲಿ ಹನುಮಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ತಡರಾತ್ರಿ ಒಂದು ಗಂಟೆಯವರೆಗೂ ನೆರವೇರಿಸಲಾಗಿತ್ತು. ಪೂಜೆ ಮುಗಿಸಿ ಎಲ್ಲರು ಮನೆಗಳಿಗೆ ತೆರಳಿದಾಗ ತಡರಾತ್ರಿ ಎರಡು ಗಂಟೆಯ ನಂತರ ಕಳ್ಳರ ಕೈಚಳಕ ನಡೆದಿರಬಹುದೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಹುಂಡಿ ಹೊಡೆದಿರುವ ಕಳ್ಳರು ಹಣ ಮತ್ತು ಸಿಸಿ ಕ್ಯಾಮೆರಾದ ಡಿವಿಆರ್ ಗಳ ಸಮೇತ ಪರಾರಿಯಾಗಿದ್ದಾರೆ ಎಂದು ತಳಿದುಬಂದಿದೆ.
ಹುಂಡಿಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಭಕ್ತರ ಕಾಣಿಕೆ ಹಣ ಇತ್ತು ಎಂದು ಸ್ಥಳೀಯರು ಹೇಳಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…