ಜಿಂಕೆ ಚರ್ಮ, ಕಾಡುಹಂದಿ ಮಾಂಸ ಸಾಗಾಟ: ಐವರು ಅರಣ್ಯಾಧಿಕಾರಿಗಳ ವಶಕ್ಕೆ

ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜಿಂಕೆ ಚರ್ಮ ಹಾಗೂ ಕಾಡುಹಂದಿ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ಸಂಜೆ ಬಂಧಿಸಿದ್ದಾರೆ.

ಬಂಧಿತರನ್ನು ತಾಲೂಕಿನ ಬಾಳೆಕೊಪ್ಪ ಗ್ರಾಮದ ಕನಕಪ್ಪ ದುರ್ಗಪ್ಪ ಮಾದರ್‌, ಪರಶುರಾಮ್ ಕನಕಪ್ಪ ಮಾದ‌ರ್ ಹಾಗೂ ಸೊರಬ ತಾಲೂಕಿನ ಕೋಡಿಕೊಪ್ಪ ಗ್ರಾಮದ ಸುರೇಶ ದೇವಪ್ಪ, ಶಿವಪುತ್ರಪ್ಪ ಹನುಮಂತಪ್ಪ ಮತ್ತು ಉಮೇಶ ಗುಡ್ಡಪ್ಪ ಎಂದು ಗುರುತಿಸಲಾಗಿದೆ.

ಕಾತೂರು ಅರಣ್ಯ ವಲಯದ ಬಾಳೆಕೊಪ್ಪ (ಕರ್ಕಲ ಜಡ್ಡಿ) ಗ್ರಾಮದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಬೇಟೆ ನಡೆಯುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಬ್ಬಂದಿ, ಎರಡು ಬೈಕ್‌ಗಳಲ್ಲಿ ಜಿಂಕೆ ಚರ್ಮ ಹಾಗೂ ಸುಮಾರು 3.9 ಕೆ.ಜಿ.ಯಷ್ಟು ಕಾಡುಹಂದಿ ಮಾಂಸವನ್ನು ಸಾಗಿಸುತ್ತಿದ್ದಾಗ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಎರಡು ಬೈಕ್‌ಗಳು, ಜಿಂಕೆ ಚರ್ಮ ಹಾಗೂ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

41 minutes ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

1 hour ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

13 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago