ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ 16 ಶಕ್ತಿ ದೇವತೆಗಳ ಅದ್ಧೂರಿ ಉತ್ಸವ; ದೇವರ ಉತ್ಸವಕ್ಕೆ ಹರಿದು ಬಂದ ಭಕ್ತಸಾಗರ

ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮದಲ್ಲಿ ಆಂಜನೇಯಸ್ವಾಮಿ ಸೇರಿದಂತೆ 16 ಶಕ್ತಿ ದೇವತೆಗಳ ಉತ್ಸವ ಅತ್ಯಂತ ಸಂಭ್ರಮದಿಂದ ನೆರವೇರಿತು.

ಜಿಂಕೆ ಬಚ್ಚಹಳ್ಳಿ ಗ್ರಾಮಕ್ಕೆ ಆಗಮಿಸಿದ ಶಕ್ತಿ ದೇವತೆಗಳಿಗೆ ಊರಿನ ಹೆಬ್ಬಾಗಿಲಿನಲ್ಲಿ ಹೂವಿನಿಂದ ಸಿಂಗರಿಸಿ ಪೂಜಾ ಕಾರ್ಯಕ್ರಮಗಳು ನಡೆದವು. ಬಳಿಕ ಸುಮಾರು ಜಿಂಕೆ ಬಚ್ಚಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು ಕಳಸ ಹೊತ್ತು ದೇವತೆಗಳನ್ನು ಊರಿನ ಪ್ರಮುಖ ಬೀದಿಗಳ ಮುಖಾಂತರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದವರೆಗೂ ಸ್ವಾಗತ ಮಾಡಿದರು.

ಈ ವೇಳೆ ವೀರಭದ್ರ ಸ್ವಾಮಿ ಕುಣಿತ ಎಲ್ಲರ ಗಮನ ಸೆಳೆಯಿತು. ಆಂಜನೇಯಸ್ವಾಮಿ ದೇಗುಲದ ಬಳಿ ಪ್ರತಿಷ್ಟಾಪನೆ ಬಳಿಕ ಶಕ್ತಿದೇವತೆಗಳಾದ ಸಪ್ಪಲ್ಲಮ್ಮ ದೇವಿ, ಪಟಾಲಮ್ಮ ದೇವಿ, ವಿದ್ಯಾಚೌಡೇಶ್ವರಿ ತಾಯಿ, ದೊಡ್ಡಮ್ಮ ತಾಯಿ, ಪಳೇಕಮ್ಮ ತಾಯಿ, ಖಡ್ಗ ಮಹೇಶ್ವರಮ್ಮ ತಾಯಿ, ಮುತ್ಯಾಲಮ್ಮ ತಾಯಿ, ಮಾರಮ್ಮ ತಾಯಿ, ಯಲ್ಲಮ್ಮ ತಾಯಿ, ಕಾಳಮ್ಮ ತಾಯಿ, ಕೆಂಪಮ್ಮ ದೇವಿ, ಗಂಗಮ್ಮ ತಾಯಿ, ಮಹೇಶ್ವರಮ್ಮ ತಾಯಿ, ಚಿಕ್ಕ ಮಾರಮ್ಮ ತಾಯಿ, ನಲ್ಡಿ ಮಾರಮ್ಮ ತಾಯಿ ದೇವರುಗಳಿಗೆ ಪೂಜಾ – ಕೈಂಕರ್ಯಗಳು ನಡೆದವು.

ಶಾಸಕ ವೆಂಕಟರಮಣಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಗ್ರಾಮದಲ್ಲಿ ಸೇರಿದಂತೆ ಅಕ್ಕಪಕ್ಕದ ಊರುಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ನಾಡು ಸುಭಿಕ್ಷವಾಗಿರಲು ಕಾಲಕಾಲಕ್ಕೆ ದೇವರುಗಳ ಆರಾಧನೆ ಮಹತ್ವವಾಗಿದೆ ಎಂದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಗ್ರಾಮಸ್ಥರೊಂದಿಗೆ ಕುಟುಂಬ ಸಮೇತರಾಗಿ ಭಾಗವಹಿಸಿ ದೇವರುಗಳಿಗೆ ಉಡಿ ತುಂಬಿ, ಪೂಜೆ ಪುನಸ್ಕಾರ ನೆರವೇರಿಸಿದರು. ಕಳೆದ ವರ್ಷ ಉತ್ತಮ ಮಳೆಯಾಗಿ ರೈತರು ಉತ್ತಮ ಬೆಳೆ ಬೆಳೆದು ಸಮೃದ್ಧ ಜೀವನ ನಡೆಸುತ್ತಿದ್ದಾರೆ. ಮುಂದೆಯೂ ನಾಡಿಗೆ ಯಾವುದೇ ವ್ಯಾಧಿ ಭಾದಿಸದಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದರು.

ಇದೇ ವೇಳೆ ಸಾವಿರಾರು ಮಂದಿ ಭಕ್ತರು ಶಕ್ತಿ ದೇವತೆಗಳಿಗೆ ಉಡಿ ತುಂಬಿ ಪೂಜಾಕೈಂಕಕರ್ಯಗಳನ್ನು ನೆರವೇರಿಸಿದರು.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು ಸೇರಿದಂತೆ ಸಾವಿರಾರು ಮಂದಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

8 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

13 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

15 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

16 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago