ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ- ಸಿಎಂ ಸಿದ್ದರಾಮಯ್ಯ

ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ‌ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದರು.

ಜಿಎಸ್‌ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಅವರು. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ಳುವಂತಾಗಿದೆ ಎಂದು ಹೇಳಿದರು.

“ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ನಮ್ಮ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದು ಹೇಳಿದರು.

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಇಲ್ಲಿಯೇ ಸೂಚನೆ ನೀಡುತ್ತಿದ್ದೇನೆ ಎಂದರು.

ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಿಳಿಸಿದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

4 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

5 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

16 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

16 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

16 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago