ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ- ಸಿಎಂ ಸಿದ್ದರಾಮಯ್ಯ

ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ‌ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದರು.

ಜಿಎಸ್‌ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಅವರು. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ಳುವಂತಾಗಿದೆ ಎಂದು ಹೇಳಿದರು.

“ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ನಮ್ಮ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದು ಹೇಳಿದರು.

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಇಲ್ಲಿಯೇ ಸೂಚನೆ ನೀಡುತ್ತಿದ್ದೇನೆ ಎಂದರು.

ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಿಳಿಸಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago