ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ- ಸಿಎಂ ಸಿದ್ದರಾಮಯ್ಯ

ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ‌ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದರು.

ಜಿಎಸ್‌ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಅವರು. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ಳುವಂತಾಗಿದೆ ಎಂದು ಹೇಳಿದರು.

“ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ನಮ್ಮ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದು ಹೇಳಿದರು.

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಇಲ್ಲಿಯೇ ಸೂಚನೆ ನೀಡುತ್ತಿದ್ದೇನೆ ಎಂದರು.

ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಿಳಿಸಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

8 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago