ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.
ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದರು.
ಜಿಎಸ್ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಅವರು. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ಳುವಂತಾಗಿದೆ ಎಂದು ಹೇಳಿದರು.
“ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ ಜಿಎಸ್ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ನಮ್ಮ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದು ಹೇಳಿದರು.
ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಇಲ್ಲಿಯೇ ಸೂಚನೆ ನೀಡುತ್ತಿದ್ದೇನೆ ಎಂದರು.
ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…