Categories: ಕೋಲಾರ

ಜಿಪಂ ಮಾಜಿ ಸದಸ್ಯ ರಾಮಚಂದ್ರ ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆ

ಕೋಲಾರ: ಕಾಂಗ್ರೆಸ್ ಪಕ್ಷದಿಂದ ಬಲಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿಕೊಂಡು ಬರಲಾಗಿದ್ದು, ನಮ್ಮ ಸಮುದಾಯಕ್ಕೆ ಬೆಂಬಲವಾಗಿದ್ದ ಕೆ.ಎಚ್.ಮುನಿಯಪ್ಪರಿಗೂ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ ರಾಮಚಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಪಂ ಮಾಜಿ ಸದಸ್ಯ, ತಾಪಂನಲ್ಲಿ 10 ವರ್ಷ ಸದಸ್ಯ, ಉಪಾಧ್ಯಕ್ಷ, ಅಧ್ಯಕ್ಷನಾಗಿ ಸೇವೆ ಮಾಡಿದ್ದೇನೆ. ನಾನು ಎಲ್ಲ ಸಮಾಜದ ಮುಖಂಡರೊಂದಿಗೆ ಉತ್ತಮವಾಗಿ ನಡೆದುಕೊಂಡಿದ್ದೇನೆ ಕೆ.ಎಚ್.ಮುನಿಯಪ್ಪ ಜತೆಗೆ 25 ವರ್ಷ ಸುದೀರ್ಘವಾಗಿ ಕೆಲಸ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಾಗೂ ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ನಿರಂತರ ಅನ್ಯಾಯವಾಗುತ್ತಿರುವ ಬಗ್ಗೆ ನಿಯೋಗ ತೆರಳಿ ಕಾಂಗ್ರೆಸ್ ನಾಯಕರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕರೆ ಮಾಡಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದು, ಯಾವುದೇ ಬೇಡಿಕೆಗಳನ್ನಿಡದೆ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸೇರ್ಪಡೆಯಾಗಿರುವುದಾಗಿ ಹೇಳಿದರು.

ಬಲಗೈ ಸಮುದಾಯಕ್ಕೆ ಕೆ.ಎಚ್.ಮುನಿಯಪ್ಪ ಬಲವಾಗಿದ್ದರು ಇದೀಗ ಯಾರೂ ಇಲ್ಲದ ಕಾರಣ ಕಾಂಗ್ರೆಸ್ ವಿರುದ್ಧ ಸಿಟ್ಟು ಹಾಗೂ ಕೆ.ಎಚ್.ಮುನಿಯಪ್ಪರ ಅಸಹಾಯಕತೆಯಿಂದಾಗಿ ಸ್ವಾಭಿಮಾನಕ್ಕೆ ಧಕ್ಕೆ ಆದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯ ತೀರ್ಮಾನ ಕೈಗೊಳ್ಳಲಾಗಿದೆ.

ಜೆಡಿಎಸ್ ಪಕ್ಷ ರಾಜ್ಯ ಹಾಗೂ ಜಿಲ್ಲೆಯಲ್ಲಿ ಪ್ರಬುದ್ಧವಾಗಿದ್ದು, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಸ್ಥಳೀಯರು, ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಹೊರಗಿನವರಾಗಿದ್ದಾರೆ. ಹೀಗಾಗಿ ನಮ್ಮ ಸಮುದಾಯದ ಎಲ್ಲರೂ ಸೇರಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್‌ನ ಹುರಿಯಾಳು, ೩೦ ವರ್ಷಗಳಿಂದ ಉತ್ತಮ ನಾಯಕತ್ವ ಹೊಂದಿದ್ದ ಸಕ್ರಿಯ ಮುಖಂಡ ರಾಮಚಂದ್ರ ಅವರು ಕಾಂಗ್ರೆಸ್ ನಲ್ಲಿ ಪ್ರಭಾವಿ ಮುಖಂಡರಾಗಿ, ಜಿಲ್ಲೆಯಲ್ಲಿ ಪ್ರಭಲರಾಗಿದ್ದಾರೆ. ಶಾಸಕರು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದ ಕಾರಣ ಜೆಡಿಎಸ್ ನ ತತ್ವ ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ತೀರ್ಮಾನ ಮಾಡಿದ್ದಾರೆ. ಇವರ ಸೇರ್ಪಡೆಯಿಂದಾಗಿ ಪಕ್ಷಕ್ಕೆ ಬಲ ಬಂದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡ ರಾಮಚಂದ್ರರೆಡ್ಡಿ, ಹುಲಿಬೆಲೆ ಗ್ರಾಪಂ ಮಾಜಿ ಉಪಾಧ್ಯಕ್ಷ ರಂಗನಾಥ್, ಮುಖಂಡರಾದ ಯಲ್ಲಪ್ಪ, ಬಲಿಜ ಸಮುದಾಯದ ತೋಟಗಳ ಅಶೋಕ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

4 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

5 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

6 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

6 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

10 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

17 hours ago