ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕ್ರಮ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ ಆಗಿದ್ದು, ಯುವ ಸಮೂಹಕ್ಕೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಬೊಮ್ಮವಾರ ಗ್ರಾಮದಲ್ಲಿರುವ ಗಾಂಧೀ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ನಿಯಂತ್ರಣ ಕುರಿತು ಅರಿವು, ಮಾಸ್ಟರ್ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರನ್ನು ಉದ್ದೇಶಿಸಿ ಅವರು ಮಾತನಾಡಿದರು,

ಮಾದಕ ವ್ಯಸನವು ಸಮಾಜದ ಒಂದು ಪಿಡುಗಾಗಿ ಪರಿಣಮಿಸಿದೆ. ಪೋಷಕರು ತಮ್ಮ ಮಕ್ಕಳ ಚಲನವಲನ ಬಗ್ಗೆ ನಿತ್ಯ ಮತ್ತು ಗಮನಹರಿಸಬೇಕು, ಶಿಕ್ಷಕರು ಕೂಡ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು. ಸಾಕಷ್ಟು ಯುವಕ ಯುವತಿಯರು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಾರೆ. ಹಾಗಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸುವುದು, ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ನೀವು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕೆಲಸ ಮಾಡಿ, ಮಾದಕ ವ್ಯಸನ ಮುಕ್ತ ಸಮಾಜಕ್ಕೆ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು ಎಂದರು.

ಎಸ್ಪಿ ಸಿಕೆ ಬಾಬಾ ಅವರು ಮಾತನಾಡಿ ತರಬೇತಿಗೆ ಶಿಕ್ಷಕರನ್ನು ಆಯ್ಕೆ ಮಾಡಿರುವ ಉದ್ದೇಶ ಶಿಕ್ಷಕರು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು. ಯುವ ಸಮೂಹವನ್ನು ಮಾದಕ ವ್ಯಸನದಿಂದ ದೂರ ಇಡಬೇಕು. ಮಾದಕ ವಸ್ತುಗಳ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇದು ಒಂದು ಯುದ್ಧ, ಪ್ರತಿಯೊಬ್ಬ ವಿದ್ಯಾರ್ಥಿಗೆ ಅರಿವು ತಲುಪಬೇಕು. ಡ್ರಗ್ಸ್ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಉಪನ್ಯಾಸಕರಿಂದ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಟ, ಬಳಕೆ ಕುರಿತು ಶಾಲಾ ಕಾಲೇಜಿನ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಈ ಸೂಪರ್ವೈಸರ್ ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಿದ್ದು ಮಾದಕ ವಸ್ತುಗಳ ನಿಯಂತ್ರಣಕ್ಕೆ ಸಹಕಾರಿ ಆಗಲಿದೆ.

ಕಾರ್ಯಾಗಾರದಲ್ಲಿ ಅಬಕಾರಿ ಇಲಾಖೆ ಜಿಲ್ಲಾಧಿಕಾರಿ ರವೀಂದ್ರ, ಪೊಲೀಸ್ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಸೈಯದ್ ತಬ್ಸಿವುಲ್ಲಾ, ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ಎನ್ಸಿಬಿ ಸೂಪರಿಂಟೆಂಡೆಂಟ್ ರತನ್, ಆರೋಗ್ಯ ಇಲಾಖೆಯ ಮನೋವೈದ್ಯರಾದ ಡಾ.ಗರೀಶ್ ಕುಮಾರ್, ಇಶಾ ವಾಲೆಂಟಿರಿ ಮನು, ಡಾ ಪ್ರಮೋದ್, ಸೇರಿದಂತೆ ಶಿಕ್ಷಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

56 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago