ಜಿಲ್ಲಾಡಳಿತ ಭವನದಲ್ಲಿ ಕೆಟ್ಟು ನಿಂತ ಲಿಫ್ಟ್; ಮೆಟ್ಟಿಲೇ ಗತಿ; ವಿಕಲಚೇತನರು, ಮಹಿಳೆಯರು, ವೃದ್ಧರ ಪರದಾಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.

ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.

ಒಂದೊಂದು ಮಹಡಿಯಲ್ಲಿ ಒಂದೊಂದು ಇಲಾಖೆಯ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಭವನದಲ್ಲಿ ಎರಡು ಕಡೆ ಲಿಫ್ಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಹಲವು ತಿಂಗಳುಗಳಿಂದ ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಸೇವೆ ಸ್ಥಗಿತಗೊಂಡಿದೆ. ಇದರಿಂದ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ತೆರಳಲು ಮೆಟ್ಟಿಲು ಹತ್ತುವದು ವಿಕಲಚೇತನರು, ಮಹಿಳೆಯರು, ಹಿರಿಯ ನಾಗರಿಕರಿಗೆ ಅನಿವಾರ್ಯವಾಗಿದೆ. ಈ ಕುರಿತು ದೂರು ನೀಡಿದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಲಿಫ್ಟ್ ಕೆಟ್ಟು ನಿಂತು 5 ತಿಂಗಳಾದ್ರು ದುರಸ್ತಿ ಮಾಡುವ ಪ್ರಯತ್ನವನ್ನ ಕಟ್ಟಡ ನಿರ್ವಹಣೆ ಹೊಣೆ ಹೊತ್ತವರು ಮಾಡಿಲ್ಲ, ಕೇವಲ ಕಾಗದ ಪತ್ರಗಳ ವ್ಯವಹಾರ ಮಾಡಿ ಸುಮ್ಮನಾಗಿದ್ದಾರೆ.

ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

3 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

6 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

23 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

23 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago