ಜಿಲ್ಲಾಡಳಿತ ಭವನದಲ್ಲಿ ಕೆಟ್ಟು ನಿಂತ ಲಿಫ್ಟ್; ಮೆಟ್ಟಿಲೇ ಗತಿ; ವಿಕಲಚೇತನರು, ಮಹಿಳೆಯರು, ವೃದ್ಧರ ಪರದಾಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.

ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.

ಒಂದೊಂದು ಮಹಡಿಯಲ್ಲಿ ಒಂದೊಂದು ಇಲಾಖೆಯ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಭವನದಲ್ಲಿ ಎರಡು ಕಡೆ ಲಿಫ್ಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಹಲವು ತಿಂಗಳುಗಳಿಂದ ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಸೇವೆ ಸ್ಥಗಿತಗೊಂಡಿದೆ. ಇದರಿಂದ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ತೆರಳಲು ಮೆಟ್ಟಿಲು ಹತ್ತುವದು ವಿಕಲಚೇತನರು, ಮಹಿಳೆಯರು, ಹಿರಿಯ ನಾಗರಿಕರಿಗೆ ಅನಿವಾರ್ಯವಾಗಿದೆ. ಈ ಕುರಿತು ದೂರು ನೀಡಿದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಲಿಫ್ಟ್ ಕೆಟ್ಟು ನಿಂತು 5 ತಿಂಗಳಾದ್ರು ದುರಸ್ತಿ ಮಾಡುವ ಪ್ರಯತ್ನವನ್ನ ಕಟ್ಟಡ ನಿರ್ವಹಣೆ ಹೊಣೆ ಹೊತ್ತವರು ಮಾಡಿಲ್ಲ, ಕೇವಲ ಕಾಗದ ಪತ್ರಗಳ ವ್ಯವಹಾರ ಮಾಡಿ ಸುಮ್ಮನಾಗಿದ್ದಾರೆ.

ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

30 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

2 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago