ಜಿಲ್ಲಾಡಳಿತ ಭವನದಲ್ಲಿ ಕೆಟ್ಟು ನಿಂತ ಲಿಫ್ಟ್; ಮೆಟ್ಟಿಲೇ ಗತಿ; ವಿಕಲಚೇತನರು, ಮಹಿಳೆಯರು, ವೃದ್ಧರ ಪರದಾಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.

ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.

ಒಂದೊಂದು ಮಹಡಿಯಲ್ಲಿ ಒಂದೊಂದು ಇಲಾಖೆಯ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಭವನದಲ್ಲಿ ಎರಡು ಕಡೆ ಲಿಫ್ಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಹಲವು ತಿಂಗಳುಗಳಿಂದ ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಸೇವೆ ಸ್ಥಗಿತಗೊಂಡಿದೆ. ಇದರಿಂದ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ತೆರಳಲು ಮೆಟ್ಟಿಲು ಹತ್ತುವದು ವಿಕಲಚೇತನರು, ಮಹಿಳೆಯರು, ಹಿರಿಯ ನಾಗರಿಕರಿಗೆ ಅನಿವಾರ್ಯವಾಗಿದೆ. ಈ ಕುರಿತು ದೂರು ನೀಡಿದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಲಿಫ್ಟ್ ಕೆಟ್ಟು ನಿಂತು 5 ತಿಂಗಳಾದ್ರು ದುರಸ್ತಿ ಮಾಡುವ ಪ್ರಯತ್ನವನ್ನ ಕಟ್ಟಡ ನಿರ್ವಹಣೆ ಹೊಣೆ ಹೊತ್ತವರು ಮಾಡಿಲ್ಲ, ಕೇವಲ ಕಾಗದ ಪತ್ರಗಳ ವ್ಯವಹಾರ ಮಾಡಿ ಸುಮ್ಮನಾಗಿದ್ದಾರೆ.

ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

11 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

13 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

16 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 days ago