ಜಿಲ್ಲಾಡಳಿತ ಭವನದಲ್ಲಿ ಕೆಟ್ಟು ನಿಂತ ಲಿಫ್ಟ್; ಮೆಟ್ಟಿಲೇ ಗತಿ; ವಿಕಲಚೇತನರು, ಮಹಿಳೆಯರು, ವೃದ್ಧರ ಪರದಾಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.

ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.

ಒಂದೊಂದು ಮಹಡಿಯಲ್ಲಿ ಒಂದೊಂದು ಇಲಾಖೆಯ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಭವನದಲ್ಲಿ ಎರಡು ಕಡೆ ಲಿಫ್ಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಹಲವು ತಿಂಗಳುಗಳಿಂದ ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಸೇವೆ ಸ್ಥಗಿತಗೊಂಡಿದೆ. ಇದರಿಂದ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ತೆರಳಲು ಮೆಟ್ಟಿಲು ಹತ್ತುವದು ವಿಕಲಚೇತನರು, ಮಹಿಳೆಯರು, ಹಿರಿಯ ನಾಗರಿಕರಿಗೆ ಅನಿವಾರ್ಯವಾಗಿದೆ. ಈ ಕುರಿತು ದೂರು ನೀಡಿದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಲಿಫ್ಟ್ ಕೆಟ್ಟು ನಿಂತು 5 ತಿಂಗಳಾದ್ರು ದುರಸ್ತಿ ಮಾಡುವ ಪ್ರಯತ್ನವನ್ನ ಕಟ್ಟಡ ನಿರ್ವಹಣೆ ಹೊಣೆ ಹೊತ್ತವರು ಮಾಡಿಲ್ಲ, ಕೇವಲ ಕಾಗದ ಪತ್ರಗಳ ವ್ಯವಹಾರ ಮಾಡಿ ಸುಮ್ಮನಾಗಿದ್ದಾರೆ.

ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago