ಜಿಲ್ಲಾಡಳಿತ ಭವನದಲ್ಲಿ ಭಗವಾನ್ ಬುದ್ದ ಜಯಂತಿ ಆಚರಣೆ

ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗೌತಮ ಬುದ್ಧರ ಜಯಂತಿಯನ್ನು ಸರ್ಕಾರದಿಂದ ಪ್ರಥಮವಾಗಿ ಆಚರಿಸಲಾಗುತ್ತಿದೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಬುದ್ಧ ಜಯಂತಿ ಆಚರಿಸಲಾಗುತ್ತಿದೆ. ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಒಂದು ದಿನವಾಗಿದೆ. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಭೋದಿಸಿದ ಭಗವಾನ್ ಬುದ್ಧರ ತತ್ವ ಬೋಧನೆಗಳನ್ನು ಅರಿತರೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯೂರಲಿದೆ ಎಂದರು.

ದಿವ್ಯ ಸಾನಿದ್ಯರಾಗಿದ್ದ ಬೌದ್ಧ ಬಿಕ್ಕುಣಿ ಮಾತಾ ಮೈತ್ರಿ ಅವರು ಮಾತನಾಡಿ ಬುದ್ಧನು ಹೇಳಿರುವ ಬೌದ್ಧ ಧರ್ಮದ 3 ಸಂದೇಶವನ್ನು ತಿಳಿಸಿದರು. ಬುದ್ಧರ ಉಪದೇಶಗಳು ಜ್ಞಾನ ಮಾರ್ಗವನ್ನು ಅರಿತರೇ ಅದು ಮನುಷ್ಯರ ಮನಸ್ಸಿನ ಶುದ್ಧಿ ಮತ್ತು ಇದರಿಂದ ದುಃಖ ನಿವಾರಣೆ ಹೊಂದಲು ಸಾಧ್ಯವಾಗುತ್ತದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ವಕೀಲ ಮಹೇಶ್ ದಾಸ್ ಅವರು ಪ್ರಾಚೀನ ಗ್ರಂಥಗಳ ಪ್ರಕಾರ, ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಮತ್ತು ಭೌತಿಕ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು. ಒಮ್ಮೆ, ಅವನು ಒಬ್ಬ ಮುದುಕ, ಅಸ್ವಸ್ಥ ಮತ್ತು ಶವವನ್ನು ನೋಡಿದನು. ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಚೋದನೆಯನ್ನು ಅವರು ಇದರಿಂದ ಪಡೆದುಕೊಂಡರು. ನಂತರ ಅವರು ಉತ್ತರಗಳನ್ನು ಪಡೆಯುವ ಹುಡುಕಾಟದಲ್ಲಿ 29 ನೇ ವಯಸ್ಸಿನಲ್ಲಿ ತನ್ನ ಮನೆಯನ್ನು ತೊರೆದು ಆಲದ ಮರದ ಕೆಳಗೆ ಕುಳಿತು ಜ್ಞಾನೋದಯವನ್ನು ಪಡೆಯಲು ಪ್ರಯತ್ನಿಸಿದರು. ಆಳವಾದ ಧ್ಯಾನದ ನಂತರ ಅವರು ತಮ್ಮ 35ನೇ ವಯಸ್ಸಿನಲ್ಲಿ ಜ್ಞಾನೋದಯವನ್ನು ಪಡೆದುಕೊಂಡು ಮಹಾತ್ಮ ಬುದ್ಧ ಎಂದು ಕರೆಸಿಕೊಂಡರು. ಈ ಜ್ಞಾನದಿಂದ ಅವರು ಸಾಕಷ್ಟು ಬೋಧನೆಗಳನ್ನು ನೀಡಿದ್ದರು. ಅದನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖಂಡರಾದ ಶ್ರೀನಿವಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

7 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

8 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago