ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ- ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್

ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ. ಎನ್ ಅವರು ಹೇಳಿದರು.

ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತದಾನ ಮಾಡಬೇಕು. 2011 ರ ಜನವರಿ 25 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಈ ಬಾರಿ ಯುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ನೋಂದಣಿಗೆ ಮನವಿ ಮಾಡುವ ಕೆಲಸವಾಗಿದೆ. ಯುವ ಮತದಾರರ ನೋಂದಾಯಿಸಲು ಗ್ರಾಮಪಂಚಾಯತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದೆ. ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಶತಾಯುಷಿ ಗಳು ಕೂಡ ಮತದಾನ ಮಾಡುವ ಉದಾಹರಣೆ ಇದೆ. ಇದರಿಂದ ಯುವಕರು ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ರವರು ಮಾತನಾಡಿ, ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೋಂದಣಿ ಮಾಡಬೇಕು. ಮತದಾನ ಮಾಡಬೇಕು. ಈ ವರ್ಷ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದರು.

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ  ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.85 ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಗರದಲ್ಲಿ ಮತದಾನಕ್ಕೆ ಆಸಕ್ತಿ ಕಡಿಮೆ ಇದ್ದು, ಬೇರೆ ಬೇರೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸ್ವೀಪ್ ಕೆಲಸಗಳನ್ನು ಮುಂದುವರೆಸಲಾಗುತ್ತದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆ ಕಾರ್ಯಕ್ರಮ ನಂತರ ಜಿಲ್ಲಾಡಳಿತ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಮತದಾರರ ಜಾಗೃತಿ ಅಭಿಯಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago