ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ- ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್

ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ. ಎನ್ ಅವರು ಹೇಳಿದರು.

ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತದಾನ ಮಾಡಬೇಕು. 2011 ರ ಜನವರಿ 25 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಈ ಬಾರಿ ಯುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ನೋಂದಣಿಗೆ ಮನವಿ ಮಾಡುವ ಕೆಲಸವಾಗಿದೆ. ಯುವ ಮತದಾರರ ನೋಂದಾಯಿಸಲು ಗ್ರಾಮಪಂಚಾಯತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದೆ. ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಶತಾಯುಷಿ ಗಳು ಕೂಡ ಮತದಾನ ಮಾಡುವ ಉದಾಹರಣೆ ಇದೆ. ಇದರಿಂದ ಯುವಕರು ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ರವರು ಮಾತನಾಡಿ, ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೋಂದಣಿ ಮಾಡಬೇಕು. ಮತದಾನ ಮಾಡಬೇಕು. ಈ ವರ್ಷ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದರು.

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ  ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.85 ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಗರದಲ್ಲಿ ಮತದಾನಕ್ಕೆ ಆಸಕ್ತಿ ಕಡಿಮೆ ಇದ್ದು, ಬೇರೆ ಬೇರೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸ್ವೀಪ್ ಕೆಲಸಗಳನ್ನು ಮುಂದುವರೆಸಲಾಗುತ್ತದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆ ಕಾರ್ಯಕ್ರಮ ನಂತರ ಜಿಲ್ಲಾಡಳಿತ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಮತದಾರರ ಜಾಗೃತಿ ಅಭಿಯಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

22 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago