ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ. ಎನ್ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತದಾನ ಮಾಡಬೇಕು. 2011 ರ ಜನವರಿ 25 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಈ ಬಾರಿ ಯುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ನೋಂದಣಿಗೆ ಮನವಿ ಮಾಡುವ ಕೆಲಸವಾಗಿದೆ. ಯುವ ಮತದಾರರ ನೋಂದಾಯಿಸಲು ಗ್ರಾಮಪಂಚಾಯತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದೆ. ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಶತಾಯುಷಿ ಗಳು ಕೂಡ ಮತದಾನ ಮಾಡುವ ಉದಾಹರಣೆ ಇದೆ. ಇದರಿಂದ ಯುವಕರು ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.85 ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಗರದಲ್ಲಿ ಮತದಾನಕ್ಕೆ ಆಸಕ್ತಿ ಕಡಿಮೆ ಇದ್ದು, ಬೇರೆ ಬೇರೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸ್ವೀಪ್ ಕೆಲಸಗಳನ್ನು ಮುಂದುವರೆಸಲಾಗುತ್ತದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…