ಜಿಲ್ಲಾದ್ಯಂತ ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 9282 ವಿದ್ಯಾರ್ಥಿಗಳು ಹಾಜರಿ, 302 ವಿದ್ಯಾರ್ಥಿಗಳು ಗೈರು: ದೊಡ್ಡಬಳ್ಳಾಪುರದಲ್ಲಿ ಎಷ್ಟು ಗೈರು, ಎಷ್ಟು ಹಾಜರಿ…? ಇಲ್ಲಿದೆ ಮಾಹಿತಿ ಓದಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆಯು ಸುಗಮವಾಗಿ ಪ್ರಾರಂಭಗೊಂಡಿದ್ದು, ಜಿಲ್ಲೆಯ  17 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ  ಭಾಷೆ ಪರೀಕ್ಷೆಯಲ್ಲಿ ಒಟ್ಟು 9282 ವಿದ್ಯಾರ್ಥಿಗಳು ಹಾಜರಾಗಿದ್ದರೆ, 302 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಕುರಿತು ಮಾಹಿತಿ ನೀಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 2061 ವಿದ್ಯಾರ್ಥಿಗಳು ಹಾಜರಿಗಿದ್ದು, 34 ವಿದ್ಯಾರ್ಥಿಗಳು ಗೈರು ಹಾಜರಿಗಿದ್ದರು. ದೇವನಹಳ್ಳಿ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 1391 ವಿದ್ಯಾರ್ಥಿಗಳು ಹಾಜರಿ, 65 ಗೈರು ಹಾಜರಿ. ಹೊಸಕೋಟೆ ತಾಲ್ಲೂಕಿನ ಐದು ಪರೀಕ್ಷಾ ಕೇಂದ್ರಗಳಲ್ಲಿ 3191 ವಿದ್ಯಾರ್ಥಿಗಳು ಹಾಜರಿ, 92 ಗೈರು ಹಾಜರಿ ಮತ್ತು ನೆಲಮಂಗಲ ತಾಲ್ಲೂಕಿನ ಆರು ಪರೀಕ್ಷಾ ಕೇಂದ್ರಗಳಲ್ಲಿ 2677 ವಿದ್ಯಾರ್ಥಿಗಳು ಹಾಜರಿ, 111 ಗೈರು ಹಾಜರಿಯಾಗಿದ್ದಾರೆ.

ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿದ್ದು ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು ಸರಿದಂತೆ ವಿವಿಧ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು.

ಕಾನೂನು ವ್ಯವಸ್ಥೆ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ  ಜೊತೆಗೆ  ಪೊಲೀಸ್‌ ಭದ್ರತಾ ವ್ಯವಸ್ಥೆ ಕಂಡು ಬಂತು. ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿದ್ದವು.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ಪರಿಶೀಲನೆ ಮಾಡಿ, ಪರೀಕ್ಷಾ ಕೊಠಡಿಗಳಿಗೆ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂತು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago