ಜಿಲ್ಲಾದ್ಯಂತ ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 9282 ವಿದ್ಯಾರ್ಥಿಗಳು ಹಾಜರಿ, 302 ವಿದ್ಯಾರ್ಥಿಗಳು ಗೈರು: ದೊಡ್ಡಬಳ್ಳಾಪುರದಲ್ಲಿ ಎಷ್ಟು ಗೈರು, ಎಷ್ಟು ಹಾಜರಿ…? ಇಲ್ಲಿದೆ ಮಾಹಿತಿ ಓದಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆಯು ಸುಗಮವಾಗಿ ಪ್ರಾರಂಭಗೊಂಡಿದ್ದು, ಜಿಲ್ಲೆಯ  17 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ  ಭಾಷೆ ಪರೀಕ್ಷೆಯಲ್ಲಿ ಒಟ್ಟು 9282 ವಿದ್ಯಾರ್ಥಿಗಳು ಹಾಜರಾಗಿದ್ದರೆ, 302 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಕುರಿತು ಮಾಹಿತಿ ನೀಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 2061 ವಿದ್ಯಾರ್ಥಿಗಳು ಹಾಜರಿಗಿದ್ದು, 34 ವಿದ್ಯಾರ್ಥಿಗಳು ಗೈರು ಹಾಜರಿಗಿದ್ದರು. ದೇವನಹಳ್ಳಿ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 1391 ವಿದ್ಯಾರ್ಥಿಗಳು ಹಾಜರಿ, 65 ಗೈರು ಹಾಜರಿ. ಹೊಸಕೋಟೆ ತಾಲ್ಲೂಕಿನ ಐದು ಪರೀಕ್ಷಾ ಕೇಂದ್ರಗಳಲ್ಲಿ 3191 ವಿದ್ಯಾರ್ಥಿಗಳು ಹಾಜರಿ, 92 ಗೈರು ಹಾಜರಿ ಮತ್ತು ನೆಲಮಂಗಲ ತಾಲ್ಲೂಕಿನ ಆರು ಪರೀಕ್ಷಾ ಕೇಂದ್ರಗಳಲ್ಲಿ 2677 ವಿದ್ಯಾರ್ಥಿಗಳು ಹಾಜರಿ, 111 ಗೈರು ಹಾಜರಿಯಾಗಿದ್ದಾರೆ.

ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿದ್ದು ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು ಸರಿದಂತೆ ವಿವಿಧ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು.

ಕಾನೂನು ವ್ಯವಸ್ಥೆ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ  ಜೊತೆಗೆ  ಪೊಲೀಸ್‌ ಭದ್ರತಾ ವ್ಯವಸ್ಥೆ ಕಂಡು ಬಂತು. ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿದ್ದವು.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ಪರಿಶೀಲನೆ ಮಾಡಿ, ಪರೀಕ್ಷಾ ಕೊಠಡಿಗಳಿಗೆ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂತು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago