ಜಿಲ್ಲಾಧಿಕಾರಿ ಎದುರೇ ವಕೀಲರಿಗೆ ಬೆದರಿಕೆ ಆರೋಪ: ಬೆದರಿಕೆಯೊಡ್ಡಿದ ವ್ಯಕ್ತಿ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ ವಕೀಲರ ಸಂಘ


ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲದ ವಕೀಲ ಎಸ್.ಪಿ ಮುನಿರಾಜು ಮೇಲೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರ ಮುಂದೆಯೇ ಹಲ್ಲೆಗೆ ಯತ್ನ ನಡೆಸಿ, ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ದೂರು ನೀಡಿದ್ದರು ಪೊಲೀಸರು ಆರೋಪಿತರನ್ನು ಬಂಧಿಸದೇ ಇರುವ ಕ್ರಮ ಖಂಡನೀಯ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಹೇಳಿದರು.

ನಗರದ ತಾಲ್ಲೂಕು ವಕೀಲರ ಸಂಘದಲ್ಲಿ ನಡೆದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ವಕೀಲರ ಮೇಲಿನ ಹಲ್ಲೆ ಯತ್ನ, ಬೆದರಿಕೆ ಇಡೀ ಘಟನೆ ಜಿಲ್ಲಾಧಿಕಾರಿ ಮುಂದೆಯೇ ನಡೆದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಬೇಕು ಎಂದರು.

ಈ ಪ್ರಕರಣ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಪ್ರಕರಣ ಕುರಿತು ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿತರ ಬಂಧನ ಮಾಡಿಲ್ಲ. ವಕೀಲರ ರಕ್ಷಣ ಕಾಯ್ದೆ ಇದ್ದರೂ ಉಪಯೋಗವಿಲ್ಲದಂತಾಗಿದೆ. ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ ಮಾತನಾಡಿ, ಮಹೇಂದ್ರ ಎಂಬಾತ ವಕೀಲ ಎಸ್.ಪಿ ಮುನಿರಾಜು ಅವರಿಗೆ ಡಿಸಿ ಎದುರೇ ಬೆದರಿಕೆ ಹಾಕಿದ್ದಾನೆ. ಇದನ್ನು ಗಮನಿಸಿದ ಡಿಸಿ ಸುಮ್ಮನೆ ಇದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ನಡೆಯನ್ನು ವಕೀಲರ ಸಂಘ ಹಾಗೂ ಅಖಿಲ ಭಾರತ ವಕೀಲರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.

ಸಭೆಯಲ್ಲಿ ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಹಾಗೂ ವಕೀಲರು ಇದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

11 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

13 hours ago