ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲದ ವಕೀಲ ಎಸ್.ಪಿ ಮುನಿರಾಜು ಮೇಲೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರ ಮುಂದೆಯೇ ಹಲ್ಲೆಗೆ ಯತ್ನ ನಡೆಸಿ, ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ದೂರು ನೀಡಿದ್ದರು ಪೊಲೀಸರು ಆರೋಪಿತರನ್ನು ಬಂಧಿಸದೇ ಇರುವ ಕ್ರಮ ಖಂಡನೀಯ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಹೇಳಿದರು.
ನಗರದ ತಾಲ್ಲೂಕು ವಕೀಲರ ಸಂಘದಲ್ಲಿ ನಡೆದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ವಕೀಲರ ಮೇಲಿನ ಹಲ್ಲೆ ಯತ್ನ, ಬೆದರಿಕೆ ಇಡೀ ಘಟನೆ ಜಿಲ್ಲಾಧಿಕಾರಿ ಮುಂದೆಯೇ ನಡೆದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಬೇಕು ಎಂದರು.
ಈ ಪ್ರಕರಣ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಪ್ರಕರಣ ಕುರಿತು ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿತರ ಬಂಧನ ಮಾಡಿಲ್ಲ. ವಕೀಲರ ರಕ್ಷಣ ಕಾಯ್ದೆ ಇದ್ದರೂ ಉಪಯೋಗವಿಲ್ಲದಂತಾಗಿದೆ. ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ ಮಾತನಾಡಿ, ಮಹೇಂದ್ರ ಎಂಬಾತ ವಕೀಲ ಎಸ್.ಪಿ ಮುನಿರಾಜು ಅವರಿಗೆ ಡಿಸಿ ಎದುರೇ ಬೆದರಿಕೆ ಹಾಕಿದ್ದಾನೆ. ಇದನ್ನು ಗಮನಿಸಿದ ಡಿಸಿ ಸುಮ್ಮನೆ ಇದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ನಡೆಯನ್ನು ವಕೀಲರ ಸಂಘ ಹಾಗೂ ಅಖಿಲ ಭಾರತ ವಕೀಲರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.
ಸಭೆಯಲ್ಲಿ ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಹಾಗೂ ವಕೀಲರು ಇದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…