ಜಿಲ್ಲಾಧಿಕಾರಿ ಎದುರೇ ವಕೀಲರಿಗೆ ಬೆದರಿಕೆ ಆರೋಪ: ಬೆದರಿಕೆಯೊಡ್ಡಿದ ವ್ಯಕ್ತಿ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ ವಕೀಲರ ಸಂಘ


ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲದ ವಕೀಲ ಎಸ್.ಪಿ ಮುನಿರಾಜು ಮೇಲೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರ ಮುಂದೆಯೇ ಹಲ್ಲೆಗೆ ಯತ್ನ ನಡೆಸಿ, ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ದೂರು ನೀಡಿದ್ದರು ಪೊಲೀಸರು ಆರೋಪಿತರನ್ನು ಬಂಧಿಸದೇ ಇರುವ ಕ್ರಮ ಖಂಡನೀಯ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಹೇಳಿದರು.

ನಗರದ ತಾಲ್ಲೂಕು ವಕೀಲರ ಸಂಘದಲ್ಲಿ ನಡೆದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ವಕೀಲರ ಮೇಲಿನ ಹಲ್ಲೆ ಯತ್ನ, ಬೆದರಿಕೆ ಇಡೀ ಘಟನೆ ಜಿಲ್ಲಾಧಿಕಾರಿ ಮುಂದೆಯೇ ನಡೆದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಬೇಕು ಎಂದರು.

ಈ ಪ್ರಕರಣ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಪ್ರಕರಣ ಕುರಿತು ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿತರ ಬಂಧನ ಮಾಡಿಲ್ಲ. ವಕೀಲರ ರಕ್ಷಣ ಕಾಯ್ದೆ ಇದ್ದರೂ ಉಪಯೋಗವಿಲ್ಲದಂತಾಗಿದೆ. ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ ಮಾತನಾಡಿ, ಮಹೇಂದ್ರ ಎಂಬಾತ ವಕೀಲ ಎಸ್.ಪಿ ಮುನಿರಾಜು ಅವರಿಗೆ ಡಿಸಿ ಎದುರೇ ಬೆದರಿಕೆ ಹಾಕಿದ್ದಾನೆ. ಇದನ್ನು ಗಮನಿಸಿದ ಡಿಸಿ ಸುಮ್ಮನೆ ಇದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ನಡೆಯನ್ನು ವಕೀಲರ ಸಂಘ ಹಾಗೂ ಅಖಿಲ ಭಾರತ ವಕೀಲರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.

ಸಭೆಯಲ್ಲಿ ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಹಾಗೂ ವಕೀಲರು ಇದ್ದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 hour ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

4 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

22 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago