ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲದ ವಕೀಲ ಎಸ್.ಪಿ ಮುನಿರಾಜು ಮೇಲೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರ ಮುಂದೆಯೇ ಹಲ್ಲೆಗೆ ಯತ್ನ ನಡೆಸಿ, ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ದೂರು ನೀಡಿದ್ದರು ಪೊಲೀಸರು ಆರೋಪಿತರನ್ನು ಬಂಧಿಸದೇ ಇರುವ ಕ್ರಮ ಖಂಡನೀಯ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಹೇಳಿದರು.
ನಗರದ ತಾಲ್ಲೂಕು ವಕೀಲರ ಸಂಘದಲ್ಲಿ ನಡೆದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ವಕೀಲರ ಮೇಲಿನ ಹಲ್ಲೆ ಯತ್ನ, ಬೆದರಿಕೆ ಇಡೀ ಘಟನೆ ಜಿಲ್ಲಾಧಿಕಾರಿ ಮುಂದೆಯೇ ನಡೆದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಬೇಕು ಎಂದರು.
ಈ ಪ್ರಕರಣ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಪ್ರಕರಣ ಕುರಿತು ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿತರ ಬಂಧನ ಮಾಡಿಲ್ಲ. ವಕೀಲರ ರಕ್ಷಣ ಕಾಯ್ದೆ ಇದ್ದರೂ ಉಪಯೋಗವಿಲ್ಲದಂತಾಗಿದೆ. ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ ಮಾತನಾಡಿ, ಮಹೇಂದ್ರ ಎಂಬಾತ ವಕೀಲ ಎಸ್.ಪಿ ಮುನಿರಾಜು ಅವರಿಗೆ ಡಿಸಿ ಎದುರೇ ಬೆದರಿಕೆ ಹಾಕಿದ್ದಾನೆ. ಇದನ್ನು ಗಮನಿಸಿದ ಡಿಸಿ ಸುಮ್ಮನೆ ಇದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ನಡೆಯನ್ನು ವಕೀಲರ ಸಂಘ ಹಾಗೂ ಅಖಿಲ ಭಾರತ ವಕೀಲರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.
ಸಭೆಯಲ್ಲಿ ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಹಾಗೂ ವಕೀಲರು ಇದ್ದರು.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…